‘ರಾಜ್ಯಗಳು ಯುಜಿಸಿಯ ನಿಯಮಗಳನ್ನು ಬದಲಾಯಿಸಲು ಸಾಧ್ಯವಿಲ್ಲ. ಪದವಿಗೆ ಸಂಬಂಧಿಸಿದ ನಿಯಮಗಳನ್ನು ರೂಪಿಸಲು ಯುಜಿಸಿಗೆ ಮಾತ್ರ ಅಧಿಕಾರವಿದೆ. ಪರೀಕ್ಷೆಗಳನ್ನು ನಡೆಸದಿರುವುದು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸರಿಯಲ್ಲ. ಈ ನಿಟ್ಟಿನಲ್ಲಿ ರಾಜ್ಯಗಳು ಏಕಪಕ್ಷೀಯವಾಗಿ ವರ್ತಿಸಿದರೆ ಪದವಿಗಳಿಗೆ ಮಾನ್ಯತೆ ಇರುವುದಿಲ್ಲ’ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ನ್ಯಾಯಪೀಠಕ್ಕೆ ಮಾಹಿತಿ ನೀಡಿದರು.