ಬಿಬಿಸಿಯ ದೆಹಲಿ ಮತ್ತು ಮುಂಬೈ ಕಚೇರಿಗಳಲ್ಲಿ ಇತ್ತೀಚೆಗೆ ನೇರ ತೆರಿಗೆಗಳ ಕೇಂದ್ರೀಯ ಮಂಡಳಿ (ಸಿಬಿಡಿಟಿ) ಅಧಿಕಾರಿಗಳು ‘ಪರಿಶೀಲನೆ’ ನಡೆಸಿದ್ದನ್ನು ಕ್ಲೆವರ್ಲಿ ಈ ಸಭೆಯಲ್ಲಿ ಪ್ರಸ್ತಾಪಿಸಿದರು. ಈ ಬೆಳವಣಿಗೆ ಕುರಿತು ಪ್ರಧಾನಿ ರಿಷಿ ಸುನಕ್ ಕಳವಳ ವ್ಯಕ್ತಪಡಿಸಿದ್ದನ್ನು ವಿವರಿಸಿದಾಗ, ಜೈಶಂಕರ್ ಈ ಮಾತುಗಳನ್ನು ಹೇಳಿದರು ಎಂದು ಮೂಲಗಳು ಹೇಳಿವೆ.