ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರಾಖಂಡ ರಾಜ್ಯಪಾಲರಿಗೆ ಕೋವಿಡ್

Last Updated 23 ನವೆಂಬರ್ 2020, 7:24 IST
ಅಕ್ಷರ ಗಾತ್ರ

ಡೆಹ್ರಾಡೂನ್‌: ಉತ್ತರಾಖಂಡ ರಾಜ್ಯಪಾಲರಾದ ಬೇಬಿ ರಾಣಿ ಮೌರ್ಯ ಅವರಿಗೆ ಕೋವಿಡ್‌ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಅವರು ಟ್ವೀಟ್ ಮಾಡಿದ್ದಾರೆ.

‘ನನಗೆ ಕೊರೊನಾ ಸೋಂಕು‌ ದೃಢಪಟ್ಟಿದೆ. ಆದರೆ ರೋಗ ಲಕ್ಷಣಗಳು ಕಾಣಿಸಿಕೊಂಡಿಲ್ಲ. ವೈದ್ಯರ ಸಲಹೆಯಂತೆ ಪ್ರತ್ಯೇಕ ವಾಸ ಮಾಡುತ್ತಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಪರೀಕ್ಷೆಗೆ ಒಳಗಾಗಬೇಕು’ ಎಂದು ಕೋರಿದ್ದಾರೆ.

ರಾಜ್ಯಪಾಲರು ಒಂದು ವಾರದ ರಜೆಯ ಬಳಿಕ ಶುಕ್ರವಾರ ಆಗ್ರಾದಿಂದ ಮರಳಿದ್ದಾರೆ. ಶನಿವಾರ ಮತ್ತು ಭಾನುವಾರ ರಜೆಯಿದ್ದ ಕಾರಣ ರಾಜಭವನ ಮತ್ತು ರಾಜಭವನ ಸಚಿವಾಲಯದಿಂದ ದೂರವಿದ್ದರು ಎಂದು ರಾಜಭವನ ಹೇಳಿಕೆ ಬಿಡುಗಡೆ ಮಾಡಿದೆ.

ಉತ್ತರಾಖಂಡದಲ್ಲಿ ಭಾನುವಾರ 466 ಹೊಸ ಪ್ರಕರಣಗಳು ವರದಿಯಾಗಿವೆ. ಒಟ್ಟು ಪ್ರಕರಣಗಳಸಂಖ್ಯೆ 71,256ಕ್ಕೆ ಏರಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT