<p class="title"><strong>ನವದೆಹಲಿ</strong>: ಉತ್ತರಾಖಂಡ ಸಾರಿಗೆ ಸಚಿವ ಯಶ್ಪಾಲ್ ಆರ್ಯ ಅವರು ಸೋಮವಾರ ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿದರು. ತಮ್ಮ ಪುತ್ರ ಸಂಜೀವ್ ಅವರೊಂದಿಗೆ ಕಾಂಗ್ರೆಸ್ಗೆ ಸೇರ್ಪಡೆಯಾದರು.</p>.<p class="title">ಶಾಸಕರಾಗಿರುವ ಸಂಜೀವ್ ಆರ್ಯ ನೈನಿತಾಲ್ ಕ್ಷೇತ್ರ ಪ್ರತಿನಿಧಿಸುತ್ತಾರೆ. ಮುಂದಿನ ವರ್ಷ ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಗೂ ಮುನ್ನ ಪ್ರಮುಖ ನಾಯಕರ ನಿರ್ಗಮನದ ಮೂಲಕ ಬಿಜೆಪಿ ದೊಡ್ಡ ಆಘಾತವೊಂದು ಎದುರಾದಂತಾಗಿದೆ.</p>.<p class="title">ನವದೆಹಲಿಯಲ್ಲಿ ಪಕ್ಷದ ಹಿರಿಯ ನಾಯಕರಾದ ಹರೀಶ್ ರಾವತ್, ಕೆ.ಸಿ.ವೇಣುಗೋಪಾಲ್ ಮತ್ತು ರಣದೀಪ್ ಸುರ್ಜೇವಾಲಾ ಅವರ ಸಮ್ಮುಖದಲ್ಲಿ ಯಶ್ಪಾಲ್ ಆರ್ಯ ಮತ್ತು ಶಾಸಕ ಸಂಜೀವ್ ಕಾಂಗ್ರೆಸ್ಗೆ ಸೇರಿದರು.</p>.<p class="title">ಇದಕ್ಕೂ ಮೊದಲು ಯಶ್ಪಾಲ್ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿದ್ದರು.</p>.<p class="bodytext">ಅವರು2007 ರಿಂದ 2014 ರವರೆಗೆ ಉತ್ತರಾಖಂಡ ಕಾಂಗ್ರೆಸ್ ಅಧ್ಯಕ್ಷರಾಗಿದ್ದರು. ರಾವತ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಮಾಜಿ ಸ್ಪೀಕರ್ ಮತ್ತು ಸಚಿವರಾಗಿದ್ದರು. 2017ರಲ್ಲಿ ವಿಧಾನಸಭೆ ಚುನಾವಣೆಗೆ ಮುನ್ನ ಬಿಜೆಪಿ ಸೇರಿದ್ದರು. ರಾಜ್ಯದ ಮುಕ್ತೇಶ್ವರ ಕ್ಷೇತ್ರವನ್ನು ಯಶ್ಪಾಲ್ ಪ್ರತಿನಿಧಿಸುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ</strong>: ಉತ್ತರಾಖಂಡ ಸಾರಿಗೆ ಸಚಿವ ಯಶ್ಪಾಲ್ ಆರ್ಯ ಅವರು ಸೋಮವಾರ ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿದರು. ತಮ್ಮ ಪುತ್ರ ಸಂಜೀವ್ ಅವರೊಂದಿಗೆ ಕಾಂಗ್ರೆಸ್ಗೆ ಸೇರ್ಪಡೆಯಾದರು.</p>.<p class="title">ಶಾಸಕರಾಗಿರುವ ಸಂಜೀವ್ ಆರ್ಯ ನೈನಿತಾಲ್ ಕ್ಷೇತ್ರ ಪ್ರತಿನಿಧಿಸುತ್ತಾರೆ. ಮುಂದಿನ ವರ್ಷ ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಗೂ ಮುನ್ನ ಪ್ರಮುಖ ನಾಯಕರ ನಿರ್ಗಮನದ ಮೂಲಕ ಬಿಜೆಪಿ ದೊಡ್ಡ ಆಘಾತವೊಂದು ಎದುರಾದಂತಾಗಿದೆ.</p>.<p class="title">ನವದೆಹಲಿಯಲ್ಲಿ ಪಕ್ಷದ ಹಿರಿಯ ನಾಯಕರಾದ ಹರೀಶ್ ರಾವತ್, ಕೆ.ಸಿ.ವೇಣುಗೋಪಾಲ್ ಮತ್ತು ರಣದೀಪ್ ಸುರ್ಜೇವಾಲಾ ಅವರ ಸಮ್ಮುಖದಲ್ಲಿ ಯಶ್ಪಾಲ್ ಆರ್ಯ ಮತ್ತು ಶಾಸಕ ಸಂಜೀವ್ ಕಾಂಗ್ರೆಸ್ಗೆ ಸೇರಿದರು.</p>.<p class="title">ಇದಕ್ಕೂ ಮೊದಲು ಯಶ್ಪಾಲ್ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿದ್ದರು.</p>.<p class="bodytext">ಅವರು2007 ರಿಂದ 2014 ರವರೆಗೆ ಉತ್ತರಾಖಂಡ ಕಾಂಗ್ರೆಸ್ ಅಧ್ಯಕ್ಷರಾಗಿದ್ದರು. ರಾವತ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಮಾಜಿ ಸ್ಪೀಕರ್ ಮತ್ತು ಸಚಿವರಾಗಿದ್ದರು. 2017ರಲ್ಲಿ ವಿಧಾನಸಭೆ ಚುನಾವಣೆಗೆ ಮುನ್ನ ಬಿಜೆಪಿ ಸೇರಿದ್ದರು. ರಾಜ್ಯದ ಮುಕ್ತೇಶ್ವರ ಕ್ಷೇತ್ರವನ್ನು ಯಶ್ಪಾಲ್ ಪ್ರತಿನಿಧಿಸುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>