<p><strong>ಭೋಪಾಲ:</strong> ಭೋಪಾಲ್ನ ಆಜಾದ್ ನಗರದ ಮದ್ಯದಂಗಡಿಯೊಂದಕ್ಕೆ ನುಗ್ಗಿ, ಬಾಟಲಿಗಳತ್ತ ಕಲ್ಲೆಸೆದಿರುವ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿಉಮಾ ಭಾರತಿ, ರಾಜ್ಯದಲ್ಲಿ ಸಂಪೂರ್ಣ ಪಾನ ನಿಷೇಧವಾಗಬೇಕು ಎಂದು ಭಾನುವಾರ ಆಗ್ರಹಿಸಿದ್ದಾರೆ.</p>.<p>ಮದ್ಯದಂಗಡಿಗೆ ಕಲ್ಲೆಸೆದ ವಿಡಿಯೊವನ್ನು ಉಮಾ ಭಾರತಿ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೊ ಸದ್ಯ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಒಂದು ವಾರದೊಳಗೆ ಅಂಗಡಿ ಮುಚ್ಚಬೇಕು ಎಂದು ಅವರು ಮಾಲೀಕರಿಗೆ ಎಚ್ಚರಿಕೆ ನೀಡಿದ್ದಾರೆ.</p>.<p>ಮಧ್ಯಪ್ರದೇಶದ ಬಿಜೆಪಿ ಸರ್ಕಾರವು ಇತ್ತೀಚೆಗೆ ಹೊಸ ಅಬಕಾರಿ ನೀತಿಯನ್ನು ಜಾರಿಗೆ ತಂದಿದ್ದು, ‘ಹೋಮ್ ಬಾರ್’ಗಳನ್ನು ಸ್ಥಾಪಿಸಲು ಅನುಮತಿ ನೀಡಿದೆ. ಮದ್ಯದ ಚಿಲ್ಲರೆ ಮಾರಾಟದ ಬೆಲೆಯನ್ನು ಶೇಕಡಾ 20 ರಷ್ಟು ಕಡಿತಗೊಳಿಸಿದೆ. ಆದರೆ, ರಾಜ್ಯದಲ್ಲಿ ‘ಮದ್ಯ ವಿರೋಧಿ’ ಅಭಿಯಾನ ನಡೆಸುವುದಾಗಿ ಉಮಾ ಭಾರತಿ ಈ ಹಿಂದೆ ಘೋಷಿಸಿದ್ದರು.</p>.<p>ಪಾನ ನಿಷೇಧದ ಅಭಿಯಾನ ರಾಜ್ಯದ ಬಿಜೆಪಿ ಸರ್ಕಾರದ ವಿರುದ್ಧ ಅಲ್ಲ ಎಂದು ಉಮಾ ಭಾರತಿ ಅವರು ಸ್ಪಷ್ಟಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭೋಪಾಲ:</strong> ಭೋಪಾಲ್ನ ಆಜಾದ್ ನಗರದ ಮದ್ಯದಂಗಡಿಯೊಂದಕ್ಕೆ ನುಗ್ಗಿ, ಬಾಟಲಿಗಳತ್ತ ಕಲ್ಲೆಸೆದಿರುವ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿಉಮಾ ಭಾರತಿ, ರಾಜ್ಯದಲ್ಲಿ ಸಂಪೂರ್ಣ ಪಾನ ನಿಷೇಧವಾಗಬೇಕು ಎಂದು ಭಾನುವಾರ ಆಗ್ರಹಿಸಿದ್ದಾರೆ.</p>.<p>ಮದ್ಯದಂಗಡಿಗೆ ಕಲ್ಲೆಸೆದ ವಿಡಿಯೊವನ್ನು ಉಮಾ ಭಾರತಿ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೊ ಸದ್ಯ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಒಂದು ವಾರದೊಳಗೆ ಅಂಗಡಿ ಮುಚ್ಚಬೇಕು ಎಂದು ಅವರು ಮಾಲೀಕರಿಗೆ ಎಚ್ಚರಿಕೆ ನೀಡಿದ್ದಾರೆ.</p>.<p>ಮಧ್ಯಪ್ರದೇಶದ ಬಿಜೆಪಿ ಸರ್ಕಾರವು ಇತ್ತೀಚೆಗೆ ಹೊಸ ಅಬಕಾರಿ ನೀತಿಯನ್ನು ಜಾರಿಗೆ ತಂದಿದ್ದು, ‘ಹೋಮ್ ಬಾರ್’ಗಳನ್ನು ಸ್ಥಾಪಿಸಲು ಅನುಮತಿ ನೀಡಿದೆ. ಮದ್ಯದ ಚಿಲ್ಲರೆ ಮಾರಾಟದ ಬೆಲೆಯನ್ನು ಶೇಕಡಾ 20 ರಷ್ಟು ಕಡಿತಗೊಳಿಸಿದೆ. ಆದರೆ, ರಾಜ್ಯದಲ್ಲಿ ‘ಮದ್ಯ ವಿರೋಧಿ’ ಅಭಿಯಾನ ನಡೆಸುವುದಾಗಿ ಉಮಾ ಭಾರತಿ ಈ ಹಿಂದೆ ಘೋಷಿಸಿದ್ದರು.</p>.<p>ಪಾನ ನಿಷೇಧದ ಅಭಿಯಾನ ರಾಜ್ಯದ ಬಿಜೆಪಿ ಸರ್ಕಾರದ ವಿರುದ್ಧ ಅಲ್ಲ ಎಂದು ಉಮಾ ಭಾರತಿ ಅವರು ಸ್ಪಷ್ಟಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>