ವಿಶ್ವಸಂಸ್ಥೆಯವರದಿಯ ಕುರಿತು ಸರ್ಕಾರಕ್ಕೆ ಮಾಹಿತಿ ಇದೆಯೇ ಎನ್ನುವ ಕುರಿತ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಗೃಹ ಇಲಾಖೆ ರಾಜ್ಯ ಖಾತೆ ಸಚಿವ ಜಿ.ಕಿಶನ್ ರೆಡ್ಡಿ, ‘ವರದಿಯನ್ನು ಸರ್ಕಾರ ಗಮನಿಸಿದೆ. ಆದರೆ, ಕೇರಳ ಮತ್ತು ಕರ್ನಾಟಕದಲ್ಲಿ ಗಮನಾರ್ಹ ಸಂಖ್ಯೆಯ ಉಗ್ರರು ಇದ್ದಾರೆ ಎನ್ನುವುದು ವಾಸ್ತವಿಕವಾಗಿ ಸರಿಯಿಲ್ಲ. ಇಸ್ಲಾಮಿಕ್ ಸ್ಟೇಟ್(ಐಎಸ್) ಉಗ್ರರ ಇರುವಿಕೆಯ ಕುರಿತು 34 ಹಾಗೂ ಲಷ್ಕರ್ ಇ ತಯಬಾದ ಉಗ್ರರ ಇರುವಿಕೆಯ ಕುರಿತು 20 ಪ್ರಕರಣಗಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆಯು(ಎನ್ಐಎ) ದಾಖಲಿಸಿದೆ’ ಎಂದರು.