ನ್ಯಾಯಮೂರ್ತಿ ಸಮೀರ್ ದವೆ ಅವರು, ನ್ಯಾಯಾಲಯದಲ್ಲಿ ಸಲ್ಲಿಸಲಾದ ಮತ್ತು ಪ್ರಾಸಿಕ್ಯೂಷನ್ ಅವರು ಅವಲಂಬಿಸಿರುವ ಸಾಕ್ಷ್ಯದ ಪ್ರತಿಯನ್ನು ಪಡೆಯಲು ಅರ್ಜಿದಾರರಾದ ವಸ್ರಾಂ ಸರವೇಯ ಅವರಿಗೆ ಅವಕಾಶ ಕಲ್ಪಿಸಿದರು. ಸರ್ಕಾರದ ಪರ ವಕೀಲರಾದ ಮಿತೇಶ್ ಅಮಿನ್ ಅವರು ಈ ಬಗ್ಗೆ ರಾಜ್ಯ ಸರ್ಕಾರಕ್ಕೆ ಯಾವುದೇ ಅಭ್ಯಂತರವಿಲ್ಲ ಎಂದು ಹೇಳಿದ ಬಳಿಕ ನ್ಯಾಯಮೂರ್ತಿ ದವೆ ಅವರು, ಸಂತ್ರಸ್ತರಿಗೆ ಎಲ್ಲ ಸಾಕ್ಷ್ಯ ಮತ್ತು ದಾಖಲೆಗಳನ್ನು ಒದಗಿಸಲು ಆದೇಶ ನೀಡಿದರು.