ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಂಗಾಳ ಹಿಂಸಾಚಾರ‌ ಮಾನವೀಯತೆಗೆ ನಾಚಿಕೆಗೇಡು: ಮಮತಾಗೆ ರಾಜ್ಯಪಾಲ

Last Updated 6 ಜೂನ್ 2021, 10:38 IST
ಅಕ್ಷರ ಗಾತ್ರ

ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆ ಬಳಿಕ ನಡೆಯುತ್ತಿರುವ ತಡೆಯಿಲ್ಲದ ಹಿಂಸಾಚಾರ ಪ್ರಕರಣಗಳು ಮಾನವೀಯತೆಗೆ ನಾಚಿಕೆಯನ್ನುಂಟು ಮಾಡುತ್ತಿವೆ ಎಂದು ರಾಜ್ಯಪಾಲ ಜಗದೀಪ್‌ ಧನಖರ್‌ ಅವರು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಚುನಾವಣೋತ್ತರಗಲಭೆ ಸಂಬಂಧ ಟ್ವಿಟರ್‌ನಲ್ಲಿ ಕಿಡಿಕಾರಿರುವ ಅವರು,ʼ‌ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವವಿರುವ ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಬಳಿಕ ನಡೆಯುತ್ತಿರುವ ತಡೆಯಿಲ್ಲದ ಹಿಂಸಾಚಾರವು ಮನುಷ್ಯತ್ವಕ್ಕೆನಾಚಿಕೆಯನ್ನುಂಟು ಮಾಡುತ್ತಿದೆ. ಇಂತಹ ಕೃತ್ಯಗಳಲ್ಲಿ ತೊಡಗಿರುವವರನ್ನು ನಿಯಂತ್ರಿಸಲು ರಾಜ್ಯ ಪೊಲೀಸ್‌ ವ್ಯವಸ್ಥೆಗೆ ಸಾಧ್ಯವಾಗಿಲ್ಲ. ಗಲಭೆ ಕೃತ್ಯದಲ್ಲಿ ಭಾಗಿಯಾದವರನ್ನು ಶಿಕ್ಷಿಸಬೇಕು ಮತ್ತು ಶಿಸ್ತು ಮೂಡಿಸಬೇಕುʼ ಎಂದಿದ್ದಾರೆ.

ಹಿಂಸಾಚಾರದ ಬಳಿಕ ಹಾನಿಯಾಗಿರುವ ಮನೆಗಳ ದೃಶ್ಯಗಳನ್ನೊಳಗೊಂಡ ವಿಡಿಯೊಹಾಗೂಗಲಭೆ ಸಂತ್ರಸ್ತರುದಕ್ಷಿಣ 24ಪರಗಣ ಜಿಲ್ಲೆಯಲ್ಲಿ ಪೊಲೀಸರಿಗೆ ನೀಡಿರುವ ದೂರಿನ ಪ್ರತಿಯ ಚಿತ್ರವನ್ನೂ ಹಂಚಿಕೊಂಡಿದ್ದಾರೆ.

ʼಬಂಗಾಳದ ಪೊಲೀಸ್‌ ಮಹಾನಿರ್ದೇಶಕರೊಂದಿಗೆ ವಿವರಗಳನ್ನು ಹಂಚಿಕೊಂಡಿದ್ದೇನೆ. ಹಲವು ಸಂದರ್ಭಗಳಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೂ ತಿಳಿಸಿದ್ದೇನೆ. ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಇಂತಹ ಘೋರ ಲೋಪಗಳನ್ನು ಎಣಿಸುವುದು ಅನಿವಾರ್ಯವಾಗಿದೆ. ಪ್ರಜಾಪ್ರಭುತ್ವವು ಶಾಶ್ವತವಾಗಿ ದುರ್ಬಲಗೊಳ್ಳದಂತೆ ಕಾನೂನು ಮತ್ತು ಸುವ್ಯವಸ್ಥೆಯನ್ನು ಮರುಸ್ಥಾಪಿಸಲಾಗುತ್ತದೆ ಎಂದು ಭಾವಿಸುತ್ತೇನೆʼ ಎಂದು ಮತ್ತೊಂದು ಟ್ವೀಟ್‌ನಲ್ಲಿ ಹೇಳಿದ್ದಾರೆ.

ಮೇ 2ರಂದು ಬಂಗಾಳ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ರಾಜ್ಯದ ಹಲವು ಪ್ರದೇಶಗಳಲ್ಲಿ ಗಲಭೆ ಪ್ರಕರಣಗಳು ವರದಿಯಾಗಿದ್ದವು. ಹಿಂಸಾಚಾರದ ವೇಳೆ ಪಕ್ಷದ 9 ಕಾರ್ಯಕರ್ತರನ್ನು ಹತ್ಯೆ ಮಾಡಲಾಗಿದೆ ಎಂದು ವಿರೋಧ ಪಕ್ಷ ಬಿಜೆಪಿ ಆರೋಪಿಸಿತ್ತು. ಆಡಳಿತಾರೂಢ ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಅದನ್ನು ಅಲ್ಲಗಳೆದಿತ್ತು.

ಬಳಿಕ,ಗಲಭೆಸಂತ್ರಸ್ತರಪುನರ್ವಸತಿಗಾಗಿ ಕೊಲ್ಕತ್ತ ಹೈಕೋರ್ಟ್‌ರಾಜ್ಯ ಮಾನವ ಹಕ್ಕುಗಳ ಆಯೋಗ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಪ್ರತಿನಿಧಿಗಳನ್ನೊಳಗೊಂಡ ತ್ರಿಸದಸ್ಯಸಮಿತಿಯನ್ನು ರಚಿಸಿತ್ತು.

ಚುನಾವಣೆ ನಂತರ ನಡೆದ ಗಲಭೆಯಲ್ಲಿ ಬಿಜೆಪಿಯ ಇಬ್ಬರು ಕಾರ್ಯಕರ್ತರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ರಾಜ್ಯ ಸರ್ಕಾರ ಮೇ25ರಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿತ್ತು.

ಕೋಲ್ಕತ್ತ ಹೈಕೋರ್ಟ್‌ನ ಐವರುನ್ಯಾಯಾಧೀಶರಸಾಂವಿಧಾನಿಕ ಪೀಠ, ಗಲಭೆ ಪೀಡಿತ ಪ್ರದೇಶಗಳಲ್ಲಿನ ಸ್ಥಿತಿ ಹಾಗೂ ಅಲ್ಲಿ ಶಾಂತಿ ನೆಲೆಗೊಳಿಸಲು ಕೈಗೊಂಡ ಕ್ರಮಗಳ ಬಗ್ಗೆ ವರದಿ ನೀಡುವಂತೆ ರಾಜ್ಯ ಗೃಹ ಸಚಿವಾಲಯಕ್ಕೆ ಸೂಚಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT