<p><strong>ನವದೆಹಲಿ</strong>: ನಿರುದ್ಯೋಗ ವಿಷಯದಲ್ಲಿ ಕೇಂದ್ರದ ವಿರುದ್ಧ ಮತ್ತೆ ಧ್ವನಿ ಎತ್ತಿರುವಬಿಜೆಪಿಯ ಸಂಸದ ವರುಣ್ ಗಾಂಧಿ,ದೇಶದಲ್ಲಿ ಮೂರು ದಶಕಗಳಲ್ಲೇ ನಿರುದ್ಯೋಗ ಉತ್ತುಂಗದಲ್ಲಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಇಲಾಖೆಗಳಲ್ಲಿ ಮಂಜೂರಾದ 60 ಲಕ್ಷಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳು ಖಾಲಿ ಉಳಿದಿವೆ ಎಂದು ಹೇಳಿದ್ದಾರೆ.</p>.<p>ವಲಯವಾರು ಖಾಲಿ ಇರುವ ಹುದ್ದೆಗಳ ಪಟ್ಟಿಯನ್ನು ಅವರು ಟ್ವೀಟ್ ಮಾಡಿದ್ದಾರೆ.</p>.<p>‘ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ನಡೆಯದೆ ದೇಶದಾದ್ಯಂತ ಕೋಟ್ಯಂತರ ಯುವಕರು ಜುಗುಪ್ಸೆ ಮತ್ತು ಹತಾಶೆಗೆ ಒಳಗಾಗಿದ್ದಾರೆ. ಸರ್ಕಾರವೇ ನೀಡಿರುವ ಅಧಿಕೃತ ಮಾಹಿತಿ ಪ್ರಕಾರ ದೇಶದಾದ್ಯಂತ 60 ಲಕ್ಷಕ್ಕೂ ಅಧಿಕ ಮಂಜೂರಾದ ಹುದ್ದೆಗಳು ಖಾಲಿ ಇವೆ’ ಎಂದು ಅವರು ಹೇಳಿದ್ದಾರೆ.</p>.<p>‘ಮಂಜೂರಾದ ಈ ಹುದ್ದೆಗಳಿಗೆ ಹಂಚಿಕೆಯಾದ ಅನುದಾನ ಎಲ್ಲಿಗೆ ಹೋಯಿತು’ ಎಂದು ಪ್ರಶ್ನಿಸಿರುವ ಅವರು, ‘ಇದನ್ನು ತಿಳಿಯುವ ಹಕ್ಕು ದೇಶದ ಯುವಕರಿಗಿದೆ’ ಎಂದು ಹೇಳಿದ್ದಾರೆ.</p>.<p>ಈ ವಾರದ ಆರಂಭದಲ್ಲಿಯೂ ಅವರು ಖಾಲಿ ಇರುವ ಸರ್ಕಾರಿ ಹುದ್ದೆಗಳ ವಿಷಯ ಪ್ರಸ್ತಾಪಿಸಿದ್ದರು. ಆಡಳಿತಾತ್ಮಕ ಅಸಮರ್ಥತೆಗೆ ಯುವಕರು ಬೆಲೆ ತೆರುತ್ತಿದ್ದಾರೆ ಎಂದು ಪ್ರತಿಪಾದಿಸಿದ್ದರು.</p>.<p>ತಮ್ಮದೇ ಪಕ್ಷದ ನೇತೃತ್ವದ ಕೇಂದ್ರ ಸರ್ಕಾರದ ಮೂರು ವಿವಾದಿತ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟಿಸುತ್ತಿದ್ದ ರೈತರನ್ನು ಪಿಲಿಬಿಟ್ ಕ್ಷೇತ್ರದ ಸಂಸದ ವರುಣ್ ಗಾಂಧಿ ಬಹಿರಂಗವಾಗಿ ಬೆಂಬಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ನಿರುದ್ಯೋಗ ವಿಷಯದಲ್ಲಿ ಕೇಂದ್ರದ ವಿರುದ್ಧ ಮತ್ತೆ ಧ್ವನಿ ಎತ್ತಿರುವಬಿಜೆಪಿಯ ಸಂಸದ ವರುಣ್ ಗಾಂಧಿ,ದೇಶದಲ್ಲಿ ಮೂರು ದಶಕಗಳಲ್ಲೇ ನಿರುದ್ಯೋಗ ಉತ್ತುಂಗದಲ್ಲಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಇಲಾಖೆಗಳಲ್ಲಿ ಮಂಜೂರಾದ 60 ಲಕ್ಷಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳು ಖಾಲಿ ಉಳಿದಿವೆ ಎಂದು ಹೇಳಿದ್ದಾರೆ.</p>.<p>ವಲಯವಾರು ಖಾಲಿ ಇರುವ ಹುದ್ದೆಗಳ ಪಟ್ಟಿಯನ್ನು ಅವರು ಟ್ವೀಟ್ ಮಾಡಿದ್ದಾರೆ.</p>.<p>‘ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ನಡೆಯದೆ ದೇಶದಾದ್ಯಂತ ಕೋಟ್ಯಂತರ ಯುವಕರು ಜುಗುಪ್ಸೆ ಮತ್ತು ಹತಾಶೆಗೆ ಒಳಗಾಗಿದ್ದಾರೆ. ಸರ್ಕಾರವೇ ನೀಡಿರುವ ಅಧಿಕೃತ ಮಾಹಿತಿ ಪ್ರಕಾರ ದೇಶದಾದ್ಯಂತ 60 ಲಕ್ಷಕ್ಕೂ ಅಧಿಕ ಮಂಜೂರಾದ ಹುದ್ದೆಗಳು ಖಾಲಿ ಇವೆ’ ಎಂದು ಅವರು ಹೇಳಿದ್ದಾರೆ.</p>.<p>‘ಮಂಜೂರಾದ ಈ ಹುದ್ದೆಗಳಿಗೆ ಹಂಚಿಕೆಯಾದ ಅನುದಾನ ಎಲ್ಲಿಗೆ ಹೋಯಿತು’ ಎಂದು ಪ್ರಶ್ನಿಸಿರುವ ಅವರು, ‘ಇದನ್ನು ತಿಳಿಯುವ ಹಕ್ಕು ದೇಶದ ಯುವಕರಿಗಿದೆ’ ಎಂದು ಹೇಳಿದ್ದಾರೆ.</p>.<p>ಈ ವಾರದ ಆರಂಭದಲ್ಲಿಯೂ ಅವರು ಖಾಲಿ ಇರುವ ಸರ್ಕಾರಿ ಹುದ್ದೆಗಳ ವಿಷಯ ಪ್ರಸ್ತಾಪಿಸಿದ್ದರು. ಆಡಳಿತಾತ್ಮಕ ಅಸಮರ್ಥತೆಗೆ ಯುವಕರು ಬೆಲೆ ತೆರುತ್ತಿದ್ದಾರೆ ಎಂದು ಪ್ರತಿಪಾದಿಸಿದ್ದರು.</p>.<p>ತಮ್ಮದೇ ಪಕ್ಷದ ನೇತೃತ್ವದ ಕೇಂದ್ರ ಸರ್ಕಾರದ ಮೂರು ವಿವಾದಿತ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟಿಸುತ್ತಿದ್ದ ರೈತರನ್ನು ಪಿಲಿಬಿಟ್ ಕ್ಷೇತ್ರದ ಸಂಸದ ವರುಣ್ ಗಾಂಧಿ ಬಹಿರಂಗವಾಗಿ ಬೆಂಬಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>