ಈ ಬಗ್ಗೆ ಮಾಹಿತಿ ನೀಡಿರುವ ತೋಮರ್, ‘ತಮಿಳುನಾಡು, ತೆಲಂಗಾಣ, ಮಹಾರಾಷ್ಟ್ರ ಮತ್ತು ಬಿಹಾರದ ಅಖಿಲ ಭಾರತ ರೈತರ ಸಹಕಾರ ಸಮಿತಿಯ ರೈತರು ಇಂದು ಭೇಟಿಯಾದರು. ಅವರು ಕೃಷಿ ಕಾಯ್ದೆಗಳನ್ನು ಬೆಂಬಲಿಸಿ ಪತ್ರ ಸಲ್ಲಿಸಿದ್ದಾರೆ. ಮೋದಿ ಸರ್ಕಾರವು ಈ ಕಾಯ್ದೆಗಳನ್ನು ರೈತರ ಕಲ್ಯಾಣಕ್ಕಾಗಿ ರೂಪಿಸಿದೆ ಎಂದು ರೈತರು ಅಭಿಪ್ರಾಯಪಟ್ಟಿದ್ದಾರೆ ಮತ್ತು ಅವುಗಳನ್ನು ಬೆಂಬಲಿಸಿ ಸ್ವಾಗತಿಸಿದ್ದಾರೆ’ ಎಂದು ತಿಳಿಸಿದ್ದಾರೆ.