<p><strong>ನವದೆಹಲಿ:</strong> ಹೆದ್ದಾರಿ ವಲಯಕ್ಕೆ ಬಜೆಟ್ನಲ್ಲಿ ಈ ಬಾರಿ ಅತಿ ಹೆಚ್ಚಿನ ಅನುದಾನ ನಿಗದಿಪಡಿಸಲಾಗಿದ್ದು, ಬೆಂಗಳೂರು – ಚೆನ್ನೈ ಸೇರಿದಂತೆ ಎಂಟು ಎಕ್ಸ್ಪ್ರೆಸ್ ವೇಗಳ ನಿರ್ಮಾಣ ಕಾರ್ಯ 2021–22ರಲ್ಲಿ ಆರಂಭವಾಗಲಿದೆ ಎಂದು ಪ್ರಸ್ತಾಪಿಸಲಾಗಿದೆ.</p>.<p>2021–22ನೇ ಸಾಲಿಗೆ ₹1.18 ಲಕ್ಷ ಕೋಟಿ ಮೊತ್ತವನ್ನು ನಿಗದಿಪಡಿಸಲಾಗಿದ್ದು, ಹೆದ್ದಾರಿಗಳ ನಿರ್ಮಾಣ ಕಾರ್ಯವನ್ನು ತ್ವರಿಗತಿಯಲ್ಲಿ ಕೈಗೊಳ್ಳಲು ಆದ್ಯತೆ ನೀಡಲಾಗುವುದು ಎಂದು ಉಲ್ಲೇಖಿಸಲಾಗಿದೆ.</p>.<p>‘ಪ್ರಸಕ್ತ ಹಣಕಾಸು ವರ್ಷದಲ್ಲಿ 278 ಕಿಲೋ ಮೀಟರ್ ಉದ್ದದ ಬೆಂಗಳೂರು – ಚೆನ್ನೈ ಎಕ್ಸ್ಪ್ರೆಸ್ ವೇ ನಿರ್ಮಾಣ ಕಾರ್ಯ ಕೈಗೊಳ್ಳಲಾಗುವುದು’ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ನಲ್ಲಿ ತಿಳಿಸಿದ್ದಾರೆ.</p>.<p>2011ರಲ್ಲೇ ಈ ಯೋಜನೆಯನ್ನು ರೂಪಿಸಲಾಗಿದೆ. ಈ ಎಕ್ಸ್ಪ್ರೆಸ್ ವೇ ನಿರ್ಮಾಣದಿಂದ ಬೆಂಗಳೂರು ಮತ್ತು ಚೆನ್ನೈ ನಗರಗಳ ನಡುವಿನ ಸಂಚಾರದ ಅವಧಿ ನಾಲ್ಕು ಗಂಟೆಯಷ್ಟು ಕಡಿಮೆಯಾಗುತ್ತದೆ.</p>.<p>ಈ ಮಾರ್ಗವು ಕರ್ನಾಟಕ, ಆಂಧ್ರಪ್ರದೇಶ ಮೂಲಕ ತಮಿಳುನಾಡಿಗೆ ಸಾಗುತ್ತದೆ. ಹೊಸಕೋಟೆಯಿಂದ ಆರಂಭವಾಗುವ ಈ ಮಾರ್ಗವು ತಮಿಳುನಾಡಿನ ಶ್ರೀಪೆರಂಬುದೂರಿನಲ್ಲಿ ಮುಕ್ತಾಯವಾಗುತ್ತದೆ.</p>.<p>ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಈ ಯೋಜನೆಗೆ ಭೂಸ್ವಾಧೀನ ಪ್ರಕ್ರಿಯೆಯನ್ನು ಆರಂಭಿಸಿದೆ. ಆರು ಪಥಗಳ ಈ ಎಕ್ಸ್ಪ್ರೆಸ್ವೇಯನ್ನು ಸುಮಾರು ₹20 ಸಾವಿರ ಕೋಟಿ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದೆ.</p>.<p>277 ಕಿಲೋ ಮೀಟರ್ ಉದ್ದದ ಚೆನ್ನೈ–ಸೇಲಂ ಕಾರಿಡಾರ್ ಮತ್ತು 464 ಕಿಲೋ ಮೀಟರ್ ಉದ್ದದ ರಾಯಪುರ–ವಿಶಾಖಪಟ್ಟಣ ಎಕ್ಸ್ಪ್ರೆಸ್ ವೇ ನಿರ್ಮಾಣ ಕಾರ್ಯವೂ 2021–22ರಲ್ಲಿ ಆರಂಭವಾಗಲಿದೆ. ಅತ್ಯಾಧುನಿಕ ಸಂಚಾರ ನಿರ್ವಹಣೆ ವ್ಯವಸ್ಥೆಯನ್ನು ಈ ಮಾರ್ಗಗಳು ಒಳಗೊಂಡಿವೆ.</p>.<p>2020–21ನೇ ಸಾಲಿನಲ್ಲಿ ಹೆದ್ದಾರಿಗಳಿಗೆ 91,823 ಕೋಟಿ ಹಂಚಿಕೆಯಾಗಿತ್ತು. ನಂತರ ₹1.01 ಲಕ್ಷ ಕೋಟಿಗೆ ಪರಿಷ್ಕರಣೆ ಮಾಡಲಾಗಿತ್ತು.</p>.<p>₹5.35 ಲಕ್ಷ ಕೋಟಿ ಮೊತ್ತದ ಭಾರತಮಾಲಾ ಪರಿಯೋಜನಾ ಅಡಿಯಲ್ಲಿ ₹3.3 ಲಕ್ಷ ಕೋಟಿ ವೆಚ್ಚದಲ್ಲಿ 13 ಸಾವಿರ ಕಿಲೋ ಮೀಟರ್ ರಸ್ತೆ ನಿರ್ಮಾಣ ಕಾರ್ಯ ಕೈಗೊಳ್ಳಲು ಉದ್ದೇಶಿಸಲಾಗಿತ್ತು. ಇದರಲ್ಲಿ ಈಗಾಗಲೇ 3,800 ಕಿಲೋ ಮೀಟರ್ ರಸ್ತೆಯನ್ನು ನಿರ್ಮಾಣ ಮಾಡಲಾಗಿದೆ.</p>.<p>‘2022ರ ಮಾರ್ಚ್ ವೇಳೆಗೆ ಮತ್ತೆ 8,500 ಕಿಲೋ ಮೀಟರ್ ಉದ್ದದ ಹೆದ್ದಾರಿ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಲಾಗುವುದು. ಜತೆಗೆ, 11,000 ಕಿಲೋ ಮೀಟರ್ ಉದ್ದದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯೂ ಮುಕ್ತಾಯಗೊಳ್ಳಲಿದೆ’ ಎಂದು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಹೆದ್ದಾರಿ ವಲಯಕ್ಕೆ ಬಜೆಟ್ನಲ್ಲಿ ಈ ಬಾರಿ ಅತಿ ಹೆಚ್ಚಿನ ಅನುದಾನ ನಿಗದಿಪಡಿಸಲಾಗಿದ್ದು, ಬೆಂಗಳೂರು – ಚೆನ್ನೈ ಸೇರಿದಂತೆ ಎಂಟು ಎಕ್ಸ್ಪ್ರೆಸ್ ವೇಗಳ ನಿರ್ಮಾಣ ಕಾರ್ಯ 2021–22ರಲ್ಲಿ ಆರಂಭವಾಗಲಿದೆ ಎಂದು ಪ್ರಸ್ತಾಪಿಸಲಾಗಿದೆ.</p>.<p>2021–22ನೇ ಸಾಲಿಗೆ ₹1.18 ಲಕ್ಷ ಕೋಟಿ ಮೊತ್ತವನ್ನು ನಿಗದಿಪಡಿಸಲಾಗಿದ್ದು, ಹೆದ್ದಾರಿಗಳ ನಿರ್ಮಾಣ ಕಾರ್ಯವನ್ನು ತ್ವರಿಗತಿಯಲ್ಲಿ ಕೈಗೊಳ್ಳಲು ಆದ್ಯತೆ ನೀಡಲಾಗುವುದು ಎಂದು ಉಲ್ಲೇಖಿಸಲಾಗಿದೆ.</p>.<p>‘ಪ್ರಸಕ್ತ ಹಣಕಾಸು ವರ್ಷದಲ್ಲಿ 278 ಕಿಲೋ ಮೀಟರ್ ಉದ್ದದ ಬೆಂಗಳೂರು – ಚೆನ್ನೈ ಎಕ್ಸ್ಪ್ರೆಸ್ ವೇ ನಿರ್ಮಾಣ ಕಾರ್ಯ ಕೈಗೊಳ್ಳಲಾಗುವುದು’ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ನಲ್ಲಿ ತಿಳಿಸಿದ್ದಾರೆ.</p>.<p>2011ರಲ್ಲೇ ಈ ಯೋಜನೆಯನ್ನು ರೂಪಿಸಲಾಗಿದೆ. ಈ ಎಕ್ಸ್ಪ್ರೆಸ್ ವೇ ನಿರ್ಮಾಣದಿಂದ ಬೆಂಗಳೂರು ಮತ್ತು ಚೆನ್ನೈ ನಗರಗಳ ನಡುವಿನ ಸಂಚಾರದ ಅವಧಿ ನಾಲ್ಕು ಗಂಟೆಯಷ್ಟು ಕಡಿಮೆಯಾಗುತ್ತದೆ.</p>.<p>ಈ ಮಾರ್ಗವು ಕರ್ನಾಟಕ, ಆಂಧ್ರಪ್ರದೇಶ ಮೂಲಕ ತಮಿಳುನಾಡಿಗೆ ಸಾಗುತ್ತದೆ. ಹೊಸಕೋಟೆಯಿಂದ ಆರಂಭವಾಗುವ ಈ ಮಾರ್ಗವು ತಮಿಳುನಾಡಿನ ಶ್ರೀಪೆರಂಬುದೂರಿನಲ್ಲಿ ಮುಕ್ತಾಯವಾಗುತ್ತದೆ.</p>.<p>ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಈ ಯೋಜನೆಗೆ ಭೂಸ್ವಾಧೀನ ಪ್ರಕ್ರಿಯೆಯನ್ನು ಆರಂಭಿಸಿದೆ. ಆರು ಪಥಗಳ ಈ ಎಕ್ಸ್ಪ್ರೆಸ್ವೇಯನ್ನು ಸುಮಾರು ₹20 ಸಾವಿರ ಕೋಟಿ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದೆ.</p>.<p>277 ಕಿಲೋ ಮೀಟರ್ ಉದ್ದದ ಚೆನ್ನೈ–ಸೇಲಂ ಕಾರಿಡಾರ್ ಮತ್ತು 464 ಕಿಲೋ ಮೀಟರ್ ಉದ್ದದ ರಾಯಪುರ–ವಿಶಾಖಪಟ್ಟಣ ಎಕ್ಸ್ಪ್ರೆಸ್ ವೇ ನಿರ್ಮಾಣ ಕಾರ್ಯವೂ 2021–22ರಲ್ಲಿ ಆರಂಭವಾಗಲಿದೆ. ಅತ್ಯಾಧುನಿಕ ಸಂಚಾರ ನಿರ್ವಹಣೆ ವ್ಯವಸ್ಥೆಯನ್ನು ಈ ಮಾರ್ಗಗಳು ಒಳಗೊಂಡಿವೆ.</p>.<p>2020–21ನೇ ಸಾಲಿನಲ್ಲಿ ಹೆದ್ದಾರಿಗಳಿಗೆ 91,823 ಕೋಟಿ ಹಂಚಿಕೆಯಾಗಿತ್ತು. ನಂತರ ₹1.01 ಲಕ್ಷ ಕೋಟಿಗೆ ಪರಿಷ್ಕರಣೆ ಮಾಡಲಾಗಿತ್ತು.</p>.<p>₹5.35 ಲಕ್ಷ ಕೋಟಿ ಮೊತ್ತದ ಭಾರತಮಾಲಾ ಪರಿಯೋಜನಾ ಅಡಿಯಲ್ಲಿ ₹3.3 ಲಕ್ಷ ಕೋಟಿ ವೆಚ್ಚದಲ್ಲಿ 13 ಸಾವಿರ ಕಿಲೋ ಮೀಟರ್ ರಸ್ತೆ ನಿರ್ಮಾಣ ಕಾರ್ಯ ಕೈಗೊಳ್ಳಲು ಉದ್ದೇಶಿಸಲಾಗಿತ್ತು. ಇದರಲ್ಲಿ ಈಗಾಗಲೇ 3,800 ಕಿಲೋ ಮೀಟರ್ ರಸ್ತೆಯನ್ನು ನಿರ್ಮಾಣ ಮಾಡಲಾಗಿದೆ.</p>.<p>‘2022ರ ಮಾರ್ಚ್ ವೇಳೆಗೆ ಮತ್ತೆ 8,500 ಕಿಲೋ ಮೀಟರ್ ಉದ್ದದ ಹೆದ್ದಾರಿ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಲಾಗುವುದು. ಜತೆಗೆ, 11,000 ಕಿಲೋ ಮೀಟರ್ ಉದ್ದದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯೂ ಮುಕ್ತಾಯಗೊಳ್ಳಲಿದೆ’ ಎಂದು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>