ನವದೆಹಲಿ: ಉಪರಾಷ್ಟ್ರಪತಿ ಹಾಗೂ ರಾಜ್ಯಸಭಾ ಸಭಾಪತಿ ಎಂ.ವೆಂಕಯ್ಯ ನಾಯ್ಡು ಅವರು ವಿವಿಧ ರಾಜಕೀಯ ಪಕ್ಷಗಳ ನಾಯಕರೊಂದಿಗೆ ಇಂದು ಸಭೆ ನಡೆಸಲಿದ್ದಾರೆ.
ತಮ್ಮ ನಿವಾಸದಲ್ಲಿರುವ ಸರ್ದಾರ್ ವಲ್ಲಭಬಾಯಿ ಪಟೇಲ್ ಸಭಾಂಗಣದಲ್ಲಿ ಸಭೆ ನಡೆಯಲಿದ್ದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರೂ ಹಾಜರಾಗಲಿದ್ದಾರೆ.
ಜನವರಿ 29 ರಂದು 2020-21ರ ಆರ್ಥಿಕ ಸಮೀಕ್ಷೆ ಸಂಸತ್ತಿನಲ್ಲಿ ಮಂಡನೆಯಾಗಿದೆ. ಪ್ರಸ್ತುತ (2020–21) ಆರ್ಥಿಕ ವರ್ಷದಲ್ಲಿ ದೇಶದ ಆರ್ಥಿಕತ ಬೆಳವಣಿಗೆ ದರ ಶೇ. 7.7ರಷ್ಟು ಕುಂಠಿತಗೊಳ್ಳಲಿದ್ದು, ಮುಂದಿನ ಸಾಲಿನಲ್ಲಿ ಶೇ.11ರಷ್ಟು ಅಭಿವೃದ್ಧಿ ಸಾಧಿಸಲಿದೆ ಎಂದು ಆರ್ಥಿಕ ಸಮೀಕ್ಷೆ ಅಂದಾಜಿಸಿದೆ.