ಕೇಂದ್ರ ಸರ್ಕಾರವು ಬಂಡವಾಳಶಾಹಿಗಳ ಪರವಾದ ಬಜೆಟ್ ಮಂಡಿಸಿದೆ ಎನ್ನುವ ಪ್ರತಿಪಕ್ಷಗಳ ಟೀಕೆಯನ್ನು ಅವರು ತಳ್ಳಿಹಾಕಿದರು. ‘ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರವು ಜನಸಾಮಾನ್ಯರಿಗಾಗಿ ಕೆಲಸ ಮಾಡುತ್ತಿದೆ. ಮುದ್ರಾ ಯೋಜನೆ, ಗ್ರಾಮೀಣ ಪ್ರದೇಶದಲ್ಲಿ ರಸ್ತೆ ನಿರ್ಮಾಣ, ಶೌಚಾಲಯ ಮತ್ತು ವಸತಿ ನಿರ್ಮಾಣ ಯೋಜನೆಗಳು ಬಡವರಿಗಾಗಿ ರೂಪಿಸಲಾಗಿದೆ’ ಎಂದು ಪ್ರತಿಕ್ರಿಯೆ ನೀಡಿದ್ದಾರೆ.