ನವದೆಹಲಿ:ಕೊರೊನಾ ಸೋಂಕಿಗೆ ತುತ್ತಾಗಿ ಬುಧವಾರ ನಿಧನರಾದ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ನಿಧನಕ್ಕೆ ಕೇಂದ್ರ ಸಚಿವ ಸಂಪುಟ ಗುರುವಾರ ಸಂತಾಪ ಸೂಚಿಸಿತು.
ವಿಡಿಯೊ ಕಾನ್ಫರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸುರೇಶ್ ಅಂಗಡಿಯವರ ಸ್ಮರಣಾರ್ಥ ಎರಡು ನಿಮಿಷಗಳ ಮೌನ ಆಚರಿಸಲಾಯಿತು. ನಂತರ ಸಂತಾಪ ಸೂಚಕ ನಿರ್ಣಯ ಮಂಡಿಸಲಾಯಿತು.
ಸಚಿವ ಸುರೇಶ್ ಅಂಗಡಿ ಅವರ ನಿಧನದಿಂದಾಗಿ ದೇಶ ಒಬ್ಬ ಉತ್ತಮ ನಾಯಕ, ಶಿಕ್ಷಣ ತಜ್ಞ ಹಾಗೂ ಉತ್ತಮ ಸಂಸದೀಯ ಪಟುವನ್ನು ಕಳೆದುಕೊಂಡಂತಾಗಿದೆ ಎಂದು ಸಂತಾಪ ಸೂಚಕ ನಿರ್ಣಯದಲ್ಲಿ ತಿಳಿಸಲಾಗಿದೆ.