<p><strong>ಶ್ರೀನಗರ:</strong>ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜಮ್ಮು ಮತ್ತು ಕಾಶ್ಮೀರದಲ್ಲಿನ ಭದ್ರತಾ ಪರಿಸ್ಥಿತಿಯ ಅವಲೋಕನದ ಸಲುವಾಗಿ ಶ್ರೀನಗರಕ್ಕೆ ಆಗಮಿಸಿದ್ದಾರೆ. ಮೂರು ದಿನಗಳ ಕಾಲ ಅವರು ಕಣಿವೆ ರಾಜ್ಯದಲ್ಲಿ ಉಳಿದುಕೊಳ್ಳಲಿದ್ದಾರೆ.</p>.<p>ಜಮ್ಮು ಮತ್ತು ಕಾಶ್ಮೀರಕ್ಕೆನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಕೇಂದ್ರ ಸರ್ಕಾರವು ಹಿಂಪಡೆದ ಬಳಿಕ ಮತ್ತು ರಾಜ್ಯವನ್ನು ಕೇಂದ್ರಾಡಳಿತ ಪ್ರದೇಶವಾಗಿ ವಿಭಜಿಸಿದ ನಂತರ ಇದೇ ಮೊದಲ ಬಾರಿಗೆಶಾ ಇಲ್ಲಿಗೆ ಆಗಮಿಸಿದ್ದಾರೆ.</p>.<p>ಗೃಹ ಸಚಿವರಭೇಟಿ ಹಿನ್ನಲೆಯಲ್ಲಿಕಾಶ್ಮೀರದಾದ್ಯಂತ ಬಿಗಿ ಭದ್ರತೆ ಕಲ್ಪಿಸಲಾಗಿದೆ.</p>.<p>ಅಮಿತ್ ಶಾ ಅವರು ಭೇಟಿ ನೀಡುವ ಸಾಧ್ಯತೆ ಇರುವುದರಿಂದಇಲ್ಲಿನ ಜವಾಹರ್ ನಗರ್ನಲ್ಲಿರುವ ಬಿಜೆಪಿ ಕಚೇರಿ ಸುತ್ತಲೂ ಭದ್ರತಾ ಸಿಬ್ಬಂದಿ ನಿಯೋಜಿಸಲಾಗಿದೆ.ಶೇರ್-ಐ-ಕಾಶ್ಮೀರ ಇಂಟರ್ನ್ಯಾಷನಲ್ ಕನ್ವೆನ್ಷನ್ ಸೆಂಟರ್ನಲ್ಲಿ (ಎಸ್ಕೆಐಸಿಸಿ) ನಡೆಯುವ ಕಾರ್ಯಕ್ರಮಕ್ಕೆ ಅವರು ಹಾಜರಾಗುವ ಸಾಧ್ಯತೆ ಇದೆ. ಹೀಗಾಗಿ ಇಲ್ಲಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿನ ಸಂಚಾರಕ್ಕೆ ಶನಿವಾರದಿಂದ ಮೂರುದಿನಗಳವರೆಗೆ ಮಿತಿಹೇರಲಾಗಿದೆಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಕಣಿವೆಯಾದ್ಯಂತ ಮುಖ್ಯವಾಗಿ ಶ್ರೀನಗರದಲ್ಲಿ ಹೆಚ್ಚುವರಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ ಎಂದೂ ಮಾಹಿತಿ ನೀಡಿದ್ದಾರೆ.</p>.<p>ವಲಸೆ ಕಾರ್ಮಿಕರನ್ನು ಗುರಿಯಾಗಿರಿಸಿ ಉಗ್ರರು ಸರಣಿ ದಾಳಿ ನಡೆಸುತ್ತಿರುವ ಹೊತ್ತಿನಲ್ಲಿ ಗೃಹ ಸಚಿವರು ಭೇಟಿ ನೀಡುತ್ತಿರುವುದು ಮಹತ್ವ ಪಡೆದುಕೊಂಡಿದೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/india-news/strategy-to-be-drafted-to-finish-militancy-in-jammu-and-kashmir-during-amit-shahs-visit-877582.html" itemprop="url" target="_blank">ನಾಳೆಯಿಂದ ಜಮ್ಮುವಿನಲ್ಲಿ ಅಮಿತ್ ಶಾ ಪ್ರವಾಸ: ಉಗ್ರರ ಉಪಟಳ ಅಂತ್ಯಕ್ಕೆ ಕಾರ್ಯತಂತ್ರ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ:</strong>ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜಮ್ಮು ಮತ್ತು ಕಾಶ್ಮೀರದಲ್ಲಿನ ಭದ್ರತಾ ಪರಿಸ್ಥಿತಿಯ ಅವಲೋಕನದ ಸಲುವಾಗಿ ಶ್ರೀನಗರಕ್ಕೆ ಆಗಮಿಸಿದ್ದಾರೆ. ಮೂರು ದಿನಗಳ ಕಾಲ ಅವರು ಕಣಿವೆ ರಾಜ್ಯದಲ್ಲಿ ಉಳಿದುಕೊಳ್ಳಲಿದ್ದಾರೆ.</p>.<p>ಜಮ್ಮು ಮತ್ತು ಕಾಶ್ಮೀರಕ್ಕೆನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಕೇಂದ್ರ ಸರ್ಕಾರವು ಹಿಂಪಡೆದ ಬಳಿಕ ಮತ್ತು ರಾಜ್ಯವನ್ನು ಕೇಂದ್ರಾಡಳಿತ ಪ್ರದೇಶವಾಗಿ ವಿಭಜಿಸಿದ ನಂತರ ಇದೇ ಮೊದಲ ಬಾರಿಗೆಶಾ ಇಲ್ಲಿಗೆ ಆಗಮಿಸಿದ್ದಾರೆ.</p>.<p>ಗೃಹ ಸಚಿವರಭೇಟಿ ಹಿನ್ನಲೆಯಲ್ಲಿಕಾಶ್ಮೀರದಾದ್ಯಂತ ಬಿಗಿ ಭದ್ರತೆ ಕಲ್ಪಿಸಲಾಗಿದೆ.</p>.<p>ಅಮಿತ್ ಶಾ ಅವರು ಭೇಟಿ ನೀಡುವ ಸಾಧ್ಯತೆ ಇರುವುದರಿಂದಇಲ್ಲಿನ ಜವಾಹರ್ ನಗರ್ನಲ್ಲಿರುವ ಬಿಜೆಪಿ ಕಚೇರಿ ಸುತ್ತಲೂ ಭದ್ರತಾ ಸಿಬ್ಬಂದಿ ನಿಯೋಜಿಸಲಾಗಿದೆ.ಶೇರ್-ಐ-ಕಾಶ್ಮೀರ ಇಂಟರ್ನ್ಯಾಷನಲ್ ಕನ್ವೆನ್ಷನ್ ಸೆಂಟರ್ನಲ್ಲಿ (ಎಸ್ಕೆಐಸಿಸಿ) ನಡೆಯುವ ಕಾರ್ಯಕ್ರಮಕ್ಕೆ ಅವರು ಹಾಜರಾಗುವ ಸಾಧ್ಯತೆ ಇದೆ. ಹೀಗಾಗಿ ಇಲ್ಲಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿನ ಸಂಚಾರಕ್ಕೆ ಶನಿವಾರದಿಂದ ಮೂರುದಿನಗಳವರೆಗೆ ಮಿತಿಹೇರಲಾಗಿದೆಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಕಣಿವೆಯಾದ್ಯಂತ ಮುಖ್ಯವಾಗಿ ಶ್ರೀನಗರದಲ್ಲಿ ಹೆಚ್ಚುವರಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ ಎಂದೂ ಮಾಹಿತಿ ನೀಡಿದ್ದಾರೆ.</p>.<p>ವಲಸೆ ಕಾರ್ಮಿಕರನ್ನು ಗುರಿಯಾಗಿರಿಸಿ ಉಗ್ರರು ಸರಣಿ ದಾಳಿ ನಡೆಸುತ್ತಿರುವ ಹೊತ್ತಿನಲ್ಲಿ ಗೃಹ ಸಚಿವರು ಭೇಟಿ ನೀಡುತ್ತಿರುವುದು ಮಹತ್ವ ಪಡೆದುಕೊಂಡಿದೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/india-news/strategy-to-be-drafted-to-finish-militancy-in-jammu-and-kashmir-during-amit-shahs-visit-877582.html" itemprop="url" target="_blank">ನಾಳೆಯಿಂದ ಜಮ್ಮುವಿನಲ್ಲಿ ಅಮಿತ್ ಶಾ ಪ್ರವಾಸ: ಉಗ್ರರ ಉಪಟಳ ಅಂತ್ಯಕ್ಕೆ ಕಾರ್ಯತಂತ್ರ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>