<p><strong>ನವದೆಹಲಿ:</strong> ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಬೆಂಗಾವಲು ವಾಹನದ ಮೇಲೆ ನಡೆದ ಕಲ್ಲು ತೂರಾಟವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಕಟು ಶಬ್ದಗಳಿಂದ ಖಂಡಿಸಿದ್ದಾರೆ.</p>.<p>ಇಂದು ಬಂಗಾಳದಲ್ಲಿ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಮೇಲೆ ನಡೆದ ದಾಳಿ ಅತ್ಯಂತ ಖಂಡನಾರ್ಹ. ಈ ಬಗ್ಗೆ ಎಷ್ಟು ಟೀಕೆ ಮಾಡಿದರೂ ಕಡಿಮೆಯೆ. ಘಟನೆಯನ್ನ ಕೇಂದ್ರ ಸರ್ಕಾರ ಸಂಪೂರ್ಣ ಗಂಭೀರವಾಗಿ ಪರಿಗಣಿಸುತ್ತದೆ. ಪಶ್ಚಿಮ ಬಂಗಾಳ ಸರ್ಕಾರ ಪ್ರಾಯೋಜಿತ ಈ ಹಿಂಸಾಚಾರದ ಕುರಿತಂತೆ ಅಲ್ಲಿನ ಶಾಂತಿ ಪ್ರಿಯ ಜನರಿಗೆ ಅವರು ಉತ್ತರ ಕೊಡಬೇಕಿದೆ ಎಂದು ಆಗ್ರಹಿಸಿದ್ದಾರೆ.</p>.<p>ಜೆ.ಪಿ.ನಡ್ಡಾ ಅವರು ಪಕ್ಷದ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯ್ ವರ್ಗೀಯ ಜೊತೆ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಲು ಕೋಲ್ಕತ್ತಾದಿಂದ ಡೈಮಂಡ್ ಹಾರ್ಬರ್ ಕಡೆಗೆ ತೆರಳುತ್ತಿದ್ದ ಸಂದರ್ಭ, ಅಡ್ಡಗಟ್ಟಿದ ಟಿಎಂಸಿ ಕಾರ್ಯಕರ್ತರು, ಜೆ.ಪಿ. ನಡ್ಡಾ ಬೆಂಗಾವಲು ವಾಹನದ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಈ ಸಂದರ್ಭ ಮಾಧ್ಯಮಗಳ ವಾಹನಗಳಿಗೂ ಹಾನಿಯಾಗಿದೆ ಎಂದು ವರದಿಯಾಗಿದೆ.</p>.<p><strong>ಇದನ್ನೂ ಓದಿ..<a href="https://www.prajavani.net/india-news/stones-hurled-at-j-p-naddas-convoy-vijayvargiyas-vehicle-ransacked-785943.html?fbclid=IwAR3nFeOGhhGMPReL7nWLvBigjNp-adY8AgM7w_JF3mg_jI1JehdeJy5QZQk">ಬಿಜೆಪಿ ಅಧ್ಯಕ್ಷ ನಡ್ಡಾ ಬೆಂಗಾವಲು ವಾಹನಗಳ ಮೇಲೆ ಕಲ್ಲು ತೂರಾಟ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಬೆಂಗಾವಲು ವಾಹನದ ಮೇಲೆ ನಡೆದ ಕಲ್ಲು ತೂರಾಟವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಕಟು ಶಬ್ದಗಳಿಂದ ಖಂಡಿಸಿದ್ದಾರೆ.</p>.<p>ಇಂದು ಬಂಗಾಳದಲ್ಲಿ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಮೇಲೆ ನಡೆದ ದಾಳಿ ಅತ್ಯಂತ ಖಂಡನಾರ್ಹ. ಈ ಬಗ್ಗೆ ಎಷ್ಟು ಟೀಕೆ ಮಾಡಿದರೂ ಕಡಿಮೆಯೆ. ಘಟನೆಯನ್ನ ಕೇಂದ್ರ ಸರ್ಕಾರ ಸಂಪೂರ್ಣ ಗಂಭೀರವಾಗಿ ಪರಿಗಣಿಸುತ್ತದೆ. ಪಶ್ಚಿಮ ಬಂಗಾಳ ಸರ್ಕಾರ ಪ್ರಾಯೋಜಿತ ಈ ಹಿಂಸಾಚಾರದ ಕುರಿತಂತೆ ಅಲ್ಲಿನ ಶಾಂತಿ ಪ್ರಿಯ ಜನರಿಗೆ ಅವರು ಉತ್ತರ ಕೊಡಬೇಕಿದೆ ಎಂದು ಆಗ್ರಹಿಸಿದ್ದಾರೆ.</p>.<p>ಜೆ.ಪಿ.ನಡ್ಡಾ ಅವರು ಪಕ್ಷದ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯ್ ವರ್ಗೀಯ ಜೊತೆ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಲು ಕೋಲ್ಕತ್ತಾದಿಂದ ಡೈಮಂಡ್ ಹಾರ್ಬರ್ ಕಡೆಗೆ ತೆರಳುತ್ತಿದ್ದ ಸಂದರ್ಭ, ಅಡ್ಡಗಟ್ಟಿದ ಟಿಎಂಸಿ ಕಾರ್ಯಕರ್ತರು, ಜೆ.ಪಿ. ನಡ್ಡಾ ಬೆಂಗಾವಲು ವಾಹನದ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಈ ಸಂದರ್ಭ ಮಾಧ್ಯಮಗಳ ವಾಹನಗಳಿಗೂ ಹಾನಿಯಾಗಿದೆ ಎಂದು ವರದಿಯಾಗಿದೆ.</p>.<p><strong>ಇದನ್ನೂ ಓದಿ..<a href="https://www.prajavani.net/india-news/stones-hurled-at-j-p-naddas-convoy-vijayvargiyas-vehicle-ransacked-785943.html?fbclid=IwAR3nFeOGhhGMPReL7nWLvBigjNp-adY8AgM7w_JF3mg_jI1JehdeJy5QZQk">ಬಿಜೆಪಿ ಅಧ್ಯಕ್ಷ ನಡ್ಡಾ ಬೆಂಗಾವಲು ವಾಹನಗಳ ಮೇಲೆ ಕಲ್ಲು ತೂರಾಟ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>