ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಿರುಪತಿಯಲ್ಲಿ ಅಮಿತ್‌ ಶಾ; ತಿರುಮಲದ ವೆಂಕಟೇಶ್ವರ ದೇವಸ್ಥಾನಕ್ಕೆ ಭೇಟಿ

Last Updated 14 ನವೆಂಬರ್ 2021, 3:19 IST
ಅಕ್ಷರ ಗಾತ್ರ

ತಿರುಪತಿ: ಶನಿವಾರ ರಾತ್ರಿ ತಿರುಪತಿಗೆ ಬಂದಿರುವ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ತಿರುಮಲದ ಶ್ರೀ ವೆಂಕಟೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಮಾಡಿದರು.

ಆಂಧ್ರ ಪ್ರದೇಶದ ಮುಖ್ಯಮಂತ್ರಿ ವೈ.ಎಸ್‌.ಜಗನ್‌ ಮೋಹನ್‌ ರೆಡ್ಡಿ ಸಹ ಅಮಿತ್‌ ಶಾ ಅವರೊಂದಿಗೆ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಅರ್ಚಕರಿಂದ ಆಶೀರ್ವಾದ ಪಡೆದರು. ತಿರುಮಲ ತಿರುಪತಿ ದೇವಸ್ಥಾನದ (ಟಿಟಿಡಿ) ಅಧ್ಯಕ್ಷ ಸುಬ್ಬಾ ರೆಡ್ಡಿ ಹಾಗೂ ಇತರೆ ಅಧಿಕಾರಿಗಳು ಅಮಿತ್‌ ಶಾ ಅವರನ್ನು ಸನ್ಮಾನಿಸಿದರು.

ತಿರುಪತಿ ಸಮೀಪದ ರೇಣಿಗುಂಟಾ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅಮಿತ್‌ ಶಾ ಅವರನ್ನು ಮುಖ್ಯಮಂತ್ರಿ ಜಗನ್‌ ಸ್ವಾಗತಿಸಿದರು. ಅಲ್ಲಿಂದ ನೇರವಾಗಿ ತಿರುಮಲದಲ್ಲಿ ದರ್ಶನ ಪಡೆದು, ಪದ್ಮಾವತಿ ಅತಿಥಿ ಗೃಹಕ್ಕೆ ತೆರಳಿ ರಾತ್ರಿಯ ಊಟ ಮಾಡಿದರು. ಅಲ್ಲಿಂದ ತಿರುಪತಿಗೆ ಸಾಗಿ ಸ್ಟಾರ್ ಹೊಟೇಲ್‌ ಒಂದರಲ್ಲಿ ತಂಗಿದರು.

ಇಂದು ಬೆಳಿಗ್ಗೆ ಭಾರತೀಯ ವಾಯು ಪಡೆಯ ಹೆಲಿಕಾಪ್ಟರ್‌ ಮೂಲಕ ನೆಲ್ಲೂರ್‌ ಜಿಲ್ಲೆಯ ವೆಂಕಟಾಚಲಮ್‌ಗೆ ತೆರಳಿದ್ದಾರೆ. ಅವರು ಅಕ್ಷರ ವಿದ್ಯಾಲಯ, ಸ್ವರ್ಣ ಭಾರತಿ ಟ್ರಸ್ಟ್‌ ಮತ್ತು ಮುಪ್ಪವರಪು ಫೌಂಡೇಷನ್‌ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.

ಮಧ್ಯಾಹ್ನದ ವೇಳೆಗೆ ತಿರುಪತಿಗೆ ವಾಪಸ್‌ ಆಗಲಿರುವ ಅವರು ದಕ್ಷಿಣ ವಲಯದ ಕೌನ್ಸಿಲ್‌ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಸಭೆಯ ಬಳಿಕ ತಿರುಪತಿಯಲ್ಲೇ ಉಳಿಯಲಿರುವ ಅಮಿತ್‌ ಶಾ, ನಾಳೆ ಪುನಃ ತಿರುಮಲ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ. ಸೋಮವಾರ ಮಧ್ಯಾಹ್ನ ದೆಹಲಿಗೆ ಮರಳಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT