ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರ ಸಚಿವ ಕೈಲಾಸ್‌ ಚೌಧರಿಗೆ ಕೋವಿಡ್‌-19 ದೃಢ

Last Updated 8 ಆಗಸ್ಟ್ 2020, 12:53 IST
ಅಕ್ಷರ ಗಾತ್ರ

ಜೈಪುರ: ಕೇಂದ್ರದ ಕೃಷಿ ಖಾತೆ ರಾಜ್ಯ ಸಚಿವ ಕೈಲಾಸ್‌ ಚೌಧರಿ ಅವರಿಗೆ ಕೋವಿಡ್‌–19 ದೃಢಪಟ್ಟಿದೆ. ಈ ವಿಷಯವನ್ನು ಶನಿವಾರ ಅವರೇ ಬಹಿರಂಗಪಡಿಸಿದ್ದಾರೆ.

‘ಕೊರೊನಾ ಲಕ್ಷಣ ಕಾಣಿಸಿಕೊಂಡಿದ್ದರಿಂದ ಶುಕ್ರವಾರ ರಾತ್ರಿ ಕೋವಿಡ್‌ ಪರೀಕ್ಷೆ ಮಾಡಿಸಿಕೊಂಡೆ. ಅದರ ವರದಿ ಬಂದಿದ್ದು, ನನಗೆ ಸೋಂಕು ತಗುಲಿರುವುದು ಖಾತರಿಯಾಗಿದೆ. ಚಿಕಿತ್ಸೆಗಾಗಿ ಜೋಧಪುರದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದೇನೆ’ ಎಂದು ಚೌಧರಿ ಟ್ವೀಟ್‌ ಮಾಡಿದ್ದಾರೆ.

‘ನನ್ನ ಜೊತೆ ಸಂಪರ್ಕಕ್ಕೆ ಬಂದಿದ್ದ ಎಲ್ಲರೂ ತಮ್ಮ ಕುಟುಂಬದ ಸದಸ್ಯರಿಂದ ಅಂತರ ಕಾಯ್ದುಕೊಳ್ಳಬೇಕು. ಆದಷ್ಟು ಬೇಗನೆ ಕೋವಿಡ್‌ ಪರೀಕ್ಷೆಗೆ ಒಳಗಾಗಬೇಕು’ ಎಂದು ಅವರು ಹೇಳಿದ್ದಾರೆ.

ಬಾರ್ಮೆರ್‌-ಜೈಸಲ್ಮೇರ್‌ ಲೋಕಸಭಾ ಕ್ಷೇತ್ರದ ಸದಸ್ಯರಾಗಿರುವ ಚೌಧರಿ, ತಮ್ಮ ಮೂರು ದಿನಗಳ ಜೈಸಲ್ಮೇರ್‌ ಪ್ರವಾಸದ ವೇಳೆ ವಿವಿಧ ಸ್ಥಳಗಳಿಗೆ ಭೇಟಿ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT