ವಿಮಾನಯಾನ ಇಲಾಖೆ, ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ಈ ವಿಚಾರಕ್ಕೆ ಸಂಬಂಧಿಸಿದಂತೆ ಹಲವು ಬಾರಿ ಪತ್ರಗಳನ್ನು ಬರೆದಿದೆ. ವಿಮಾನಯಾನ ಸಚಿವರು ಕೂಡ ಪತ್ರ ಬರೆದು, ಸಹಕಾರ ಕೋರಿದ್ದಾರೆ. ಆದ್ರೆ, ಮುಖ್ಯಮಂತ್ರಿಗಳ ಕಚೇರಿಯಿಂದ ಇಲ್ಲಿಯವರೆಗೂ ಯಾವುದೇ ಪ್ರತಿಕ್ರಿಯೆ ಬಾರದಿರುವುದು ವಿಷಾದನೀಯ ಎಂದು ಕಿಶನ್ ರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.