ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರು ಅಪಘಾತ: ಶಸ್ತ್ರಚಿಕಿತ್ಸೆಗೆ ಒಳಗಾದ ಶ್ರೀಪಾದ ನಾಯಕ್‌

Last Updated 12 ಜನವರಿ 2021, 5:39 IST
ಅಕ್ಷರ ಗಾತ್ರ

ಪಣಜಿ: ಉತ್ತರ ಕನ್ನಡ ಜಿಲ್ಲೆಯ ಹೊಸಕಂಬಿ ಚೆಕ್‌ಪೋಸ್ಟ್ ಬಳಿ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿದ್ದ ಕೇಂದ್ರದ ರಕ್ಷಣಾ ಮತ್ತು ಆಯುಷ್ ಖಾತೆ ರಾಜ್ಯ ಸಚಿವ ಶ್ರೀಪಾದ ನಾಯಕ್‌ ಅವರು ಗೋವಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ (ಜಿಎಂಸಿಎಚ್)ಸೋಮವಾರ ರಾತ್ರಿ ಶಸ್ತ್ರಚಿಕಿತ್ಸೆಗೆ ಒಳಗಾದರು ಎಂದು ಆಸ್ಪತ್ರೆಯ ಹಿರಿಯ ಅಧಿಕಾರಿಗಳು ಮಂಗಳವಾರ ತಿಳಿಸಿದರು.

‘ಸದ್ಯ ಶ್ರೀಪಾದ ನಾಯಕ್‌ ಅವರ ಆರೋಗ್ಯ ಸ್ಥಿರವಾಗಿದೆ. ಎರಡೂ ಕೈ ಮತ್ತು ಕಾಲುಗಳ ಮೂಳೆ ಮುರಿದಿದ್ದ ಕಾರಣ ಅವರು ಶಸ್ತ್ರಚಿಕಿತ್ಸೆಗೆ ಒಳಗಾದರು’ ಎಂದು ಅಧಿಕಾರಿಗಳು ಹೇಳಿದರು.

‘ಸೋಮವಾರ ರಾತ್ರಿ 11.10ರ ಸುಮಾರಿಗೆ ಶ್ರೀಪಾದ ನಾಯಕ್‌ ಅವರನ್ನು ಪಣಜಿಯ ಜಿಎಂಸಿಎಚ್‌ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು’ ಎಂದು ಮೂಲಗಳು ಹೇಳಿವೆ.

‘ ಶ್ರೀಪಾದ್‌ ಅವರ ಪರಿಸ್ಥಿತಿರಾತ್ರಿ ವೇಳೆ ಬಹಳ ಗಂಭೀರವಾಗಿತ್ತು. ಆದರೆ ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ. ಜಿಎಂಸಿಎಚ್‌ನ ಡೀನ್‌ ಡಾ. ಶಿವಾನಂದ ಬಂಡೇಕರ್ ಅವರ ನೇತೃತ್ವದ ವೈದ್ಯರ ತಂಡವು ಅವರಿಗೆ ಚಿಕಿತ್ಸೆ ನೀಡುತ್ತಿದೆ’ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್‌ ಸಾವಂತ್‌ ಅವರು ಮಾಹಿತಿ ನೀಡಿದರು.

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ಶ್ರೀಪಾದ ನಾಯಕ್‌ ಅವರ ಕಾರು ಸೋಮವಾರ ಸಂಜೆ ಪಲ್ಟಿಯಾಗಿತ್ತು. ಈ ಅಪಘಾತದಲ್ಲಿ ಅವರ ಪತ್ನಿ ವಿಜಯಾ ನಾಯಕ್‌ ಹಾಗೂ ಕಾರಿನಲ್ಲಿದ್ದ ಸಚಿವರ ಆಪ್ತ ಕಾರ್ಯದರ್ಶಿ ದೀಪಕ್ ದುಮೆ ಅವರು ಮೃತಪಟ್ಟಿದ್ದಾರೆ. ಶ್ರೀಪಾದ ನಾಯಕ್‌ ಅವರಿಗೆ ಗಂಭೀರ ಗಾಯಗಳಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT