ಕಾಂಗ್ರೆಸ್ ಪಕ್ಷ ಈ ಚುನಾವಣೆಯಲ್ಲಿ, ‘ಅಸ್ಸಾಂನಲ್ಲಿ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿಗೆ ಅವಕಾಶ ನೀಡುವುದಿಲ್ಲ, ಐದು ಲಕ್ಷ ಯುವಕರಿಗೆ ಉದ್ಯೋಗದ ಭರವಸೆ, ಎಲ್ಲಾ ಮನೆಗಳಿಗೆ ತಿಂಗಳಿಗೆ 200 ಯೂನಿಟ್ ಉಚಿತ ವಿದ್ಯುತ್ ಒದಗಿಸುವುದು, ಗೃಹಿಣಿಯರಿಗೆ ಪ್ರತಿ ತಿಂಗಳು ₹2ಸಾವಿರ ಮಾಸಾಶನ, ಚಹಾ ತೋಟ ಕಾರ್ಮಿಕರ ಕನಿಷ್ಠ ದೈನಂದಿನ ವೇತನವನ್ನು ₹360ಕ್ಕೆ ಹೆಚ್ಚಿಸುವಂತಹ ಐದು ಭರವಸೆಗಳನ್ನು ನೀಡಿದೆ ಎಂದು ರಾಹುಲ್ ಗಾಂಧಿ ತಮ್ಮ ಟ್ವಿಟರ್ನಲ್ಲಿ ಪೋಸ್ಟ್ ಮಾಡಿದ್ದಾರೆ. ‘ಪಕ್ಷ ಅಧಿಕಾರಕ್ಕೆ ಬಂದರೆ ಇವೆಲ್ಲವನ್ನೂ ಈಡೇರಿಸಲಾಗುವುದು‘ ಎಂದು ಹೇಳಿದ್ದಾರೆ.