ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಷ್ಟ್ರದ ಹಿತಕ್ಕಾಗಿ ಬಿಜೆಪಿ ಅಧಿಕಾರ ಬಳಸುತ್ತಿದೆ: ಸಿ.ಟಿ ರವಿ

Last Updated 11 ಆಗಸ್ಟ್ 2021, 6:22 IST
ಅಕ್ಷರ ಗಾತ್ರ

ಲಖನೌ: ಬಿಎಸ್‌ಪಿ, ಕಾಂಗ್ರೆಸ್‌ ಸೇರಿದಂತೆ ಇತರೆ ವಿರೋಧ ಪಕ್ಷಗಳು ತಮ್ಮ ವೈಯಕ್ತಿಕ ಹಿತಾಸಕ್ತಿಗಾಗಿ ಅಧಿಕಾರವನ್ನು ಬಳಸಿದರೆ, ಬಿಜೆಪಿಯು ರಾಷ್ಟ್ರದ ಒಳಿತಿಗೆ ಅಧಿಕಾರವನ್ನು ಉಪಯೋಗಿಸುತ್ತಿದೆ’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅವರು ಮಂಗಳವಾರ ವಾಗ್ದಾಳಿ ನಡೆಸಿದ್ದಾರೆ.

ಕೋವಿಡ್ -19 ಸಾಂಕ್ರಾಮಿಕದ ಸಂಭಾವ್ಯ ಮೂರನೇ ಅಲೆಯಿಂದ ಜನರನ್ನು ರಕ್ಷಿಸಲು ಸ್ವಯಂಸೇವಕರಿಗೆ ತರಬೇತಿ ಕಾರ್ಯಕ್ರಮವನ್ನು ಬಿಜೆಪಿ ಆಯೋಜಿಸಿತ್ತು.

ಈ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು,‘ವಿರೋಧ ಪಕ್ಷಗಳು ಕುಟುಂಬ, ಜಾತಿ, ಭ್ರಷ್ಟಚಾರವನ್ನು ಉತ್ತೇಜಿಸಲು ಮತ್ತು ತಮ್ಮ ಹಾಗೂ ತಮ್ಮ ಆತ್ಮೀಯರ ಹಿತಾಸಕ್ತಿಗಾಗಿ ಮಾತ್ರ ಅಧಿಕಾರವನ್ನು ಬಳಸುತ್ತಿದೆ. ಇನ್ನೊಂದೆಡೆ, ಬಿಜೆಪಿಯು ಸಮಾಜ ಮತ್ತು ದೇಶದ ಹಿತಾಸಕ್ತಿಗಾಗಿ ಅಧಿಕಾರವನ್ನು ಸದುಪಯೋಗ ಮಾಡುತ್ತಿದೆ’ ಎಂದು ಸಿ.ಟಿ ರವಿ ದೂರಿದ್ದಾರೆ.

‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ಸರ್ಕಾರವು ಜನರ ಜೀವನ ಮತ್ತು ಜೀವನೋಪಾಯವನ್ನು ಉಳಿಸಲು ಪ್ರಯತ್ನಿಸುತ್ತಿದೆ. ಅಲ್ಲದೆ ಪಕ್ಷದ ಕಾರ್ಯಕರ್ತರು ಕೂಡ ಸಾರ್ವಜನಿಕ ಸೇವೆಯಲ್ಲಿ ತೊಡಗಿದ್ದಾರೆ. ಆದರೆ ವಿರೋಧ ಪಕ್ಷಗಳು ಬಡವರಿಗೆ ಸಹಾಯ ಮಾಡುವ ಬದಲು ಸುಳ್ಳನ್ನು ಹರಡುತ್ತಿದೆ. ಜನರಲ್ಲಿ ಗೊಂದಲವನ್ನು ಸೃಷ್ಟಿಸುತ್ತಿದೆ’ ಎಂದು ಆರೋಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT