ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉನ್ನಾವ್‌ ಪ್ರಕರಣ: ಶಿಕ್ಷೆ ಪ್ರಶ್ನಿಸಿದ ಅರ್ಜಿಗೆ ಪ್ರತಿಕ್ರಿಯಿಸಲು ಸೂಚನೆ

Last Updated 6 ನವೆಂಬರ್ 2020, 9:19 IST
ಅಕ್ಷರ ಗಾತ್ರ

ನವದೆಹಲಿ: ಉನ್ನಾವ್‌ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯ ತಂದೆ ಸಾವಿನ ಪ್ರಕರಣದಲ್ಲಿ ಹತ್ತು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಅನರ್ಹ ಶಾಸಕ ಕುಲದೀಪ್‌ ಸಿಂಗ್‌ ಸೆಂಗರ್‌ ಅದನ್ನು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡುವಂತೆ ಹೈಕೋರ್ಟ್‌ ಸಿಬಿಐಗೆ ಶುಕ್ರವಾರ ನೋಟಿಸ್‌ ನೀಡಿದೆ.

ಮೇಲ್ಮನವಿ ಅರ್ಜಿ ಇತ್ಯರ್ಥವಾಗುವವರೆಗೆ ವಿಚಾರಣಾ ನ್ಯಾಯಾಲಯದ ಆದೇಶ ಮತ್ತು ಶಿಕ್ಷೆಯನ್ನು ಅಮಾನತಿನಲ್ಲಿಡುವಂತೆ ಸೆಂಗರ್‌ ಮನವಿ ಮಾಡಿದ್ದು, ಈ ಕುರಿತು ಪ್ರತಿಕ್ರಿಯೆ ದಾಖಲಿಸುವಂತೆ ನ್ಯಾಯಮೂರ್ತಿ ವಿಭು ಬಖ್ರು ಅವರು ಸಿಬಿಐಗೆ ನೋಟಿಸ್‌ ಜಾರಿಗೊಳಿಸಿದ್ದಾರೆ.

ಈ ಕುರಿತ ಮುಂದಿನ ವಿಚಾರಣೆ ಇದೇ 10ಕ್ಕೆ ನಿಗದಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT