ತಿರುವನಂತಪುರ: ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರ ನೇಮಕಾತಿ ಬಳಿಕ ಕೇರಳ ಕಾಂಗ್ರೆಸ್ನಲ್ಲಿ ಅಸಮಾಧಾನ ಭುಗಿಲೆದ್ದಿದೆ. ಪಕ್ಷದ ಮುಖಂಡರಾದ ಉಮ್ಮನ್ ಚಾಂಡಿ ಮತ್ತು ರಮೇಶ್ ಚೆನ್ನಿತ್ತಲ ಬಹಿರಂಗವಾಗಿಯೇ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ. ಪಕ್ಷದ ನಾಯಕರ ಜೊತೆ ಸರಿಯಾದ ಚರ್ಚೆ ನಡೆಸದೇ ನೇಮಕಾತಿ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರಿಬ್ಬರು ಆರೋಪಿಸಿದ್ದಾರೆ.