<p><strong>ನವದೆಹಲಿ:</strong> ಸದನದಲ್ಲಿ ಶಾಸಕರು ಹಾಗೂ ಸಂಸದರ ಅಶಿಸ್ತಿನ ವರ್ತನೆಯನ್ನು ಕ್ಷಮಿಸಲಾಗದು ಎಂದಿರುವ ಸುಪ್ರೀಂ ಕೋರ್ಟ್, ಸದನದಲ್ಲಿನ ಸಾರ್ವಜನಿಕ ಆಸ್ತಿಗೆ ಹಾನಿ ಮಾಡಿದ್ದಲ್ಲಿ ಅವರು ವಿಚಾರಣೆಯನ್ನೂ ಎದುರಿಸಬೇಕು ಎಂದು ಸೋಮವಾರ ಹೇಳಿದೆ.</p>.<p>ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್ ಮತ್ತು ಎಂ.ಆರ್. ಶಾ ಅವರನ್ನು ಒಳಗೊಂಡ ನ್ಯಾಯಪೀಠ, ‘ಶಾಸಕಾಂಗ ಸಂಸ್ಥೆಗಳಲ್ಲಿ ಶಿಷ್ಟಾಚಾರ ಪಾಲನೆ ಆಗಲೇಬೇಕು’ ಎಂದು ಕೇರಳ ಸರ್ಕಾರದ ಪರವಾಗಿ ಹಾಜರಿದ್ದ ಹಿರಿಯ ವಕೀಲ ರಂಜಿತ್ ಕುಮಾರ್ ಅವರಿಗೆ ತಿಳಿಸಿತು.</p>.<p>ಕೇರಳ ವಿಧಾನಸಭೆಯಲ್ಲಿ 2015ರಲ್ಲಿ ನಡೆದ ಗದ್ದಲ ಹಾಗೂ ಪೀಠೋಪಕರಣಗಳನ್ನು ಧ್ವಂಸಗೊಳಿಸಿದ ಪ್ರಕರಣದಲ್ಲಿ, ಈಗಿನ ಶಿಕ್ಷಣ ಸಚಿವ ವಿ.ಶಿವನ್ಕುಟ್ಟಿ ಸೇರಿದಂತೆ ಸಿಪಿಎಂ ಮುಖಂಡರ ವಿರುದ್ಧದ ಪ್ರಕರಣ ಕೈಬಿಡುವಂತೆ ಕೋರಿ ಕೇರಳ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆಯನ್ನು ನ್ಯಾಯಪೀಠ ನಡೆಸಿತು.</p>.<p>ಆರೋಪ ಎದುರಿಸುತ್ತಿರುವ ಸದಸ್ಯರು ಆಗ ವಿರೋಧ ಪಕ್ಷದಲ್ಲಿದ್ದರು.</p>.<p>‘ಮಸೂದೆಯೊಂದರ ಮೇಲೆ ಚರ್ಚೆ ನಡೆಯುತ್ತಿರುವಾಗ, ಶಾಸಕರು ಎನ್ನಿಸಿಕೊಂಡವರು ಮೈಕ್ ಕಿತ್ತೆಸೆದು, ಪೀಠೋಪಕರಣಗಳನ್ನು ಧ್ವಂಸ ಮಾಡಿದ್ದಾರೆ. ಅವರ ಈ ವರ್ತನೆ ಅಕ್ಷಮ್ಯ’ ಎಂದು ನ್ಯಾಯಪೀಠ ಹೇಳಿದೆ.</p>.<p>‘ಸಾರ್ವಜನಿಕರ ಎದುರು ಯಾವ ವರ್ತನೆಯನ್ನು ನೀವು ಸಮರ್ಥಿಸಿಕೊಳ್ಳಲು ಹೊರಟಿದ್ದೀರಿ? ತುಂಬಾ ಪ್ರಮುಖವಾದ ಬಜೆಟ್ ಮಂಡನೆ ಸಂದರ್ಭದಲ್ಲಿ ಗಲಾಟೆ ನಡೆಸಿದ ಈ ನಡವಳಿಕೆಯ ಹಿಂದೆ ಯಾವ ಸಾರ್ವಜನಿಕ ಹಿತಾಸಕ್ತಿ ಇದೆ?’ ಎಂದು ವಕೀಲರನ್ನು ತರಾಟೆಗೆ ತೆಗೆದುಕೊಂಡಿತು.</p>.<p>ಪ್ರಕರಣವನ್ನು ವಾಪಸ್ ತೆಗೆದುಕೊಳ್ಳುವುದು ಪಬ್ಲಿಕ್ ಪ್ರಾಸಿಕ್ಯೂಟರ್ ನಿರ್ಧಾರವೇ ಹೊರತು ರಾಜ್ಯ ಸರ್ಕಾರದ್ದಲ್ಲ ಎಂದು ಚಾಟಿ ಬೀಸಿದ ಪೀಠ, ಹೆಚ್ಚುವರಿ ದಾಖಲೆಗಳೊಂದಿಗೆ ಬರುವಂತೆ ಆದೇಶಿಸಿ ವಿಚಾರಣೆಯನ್ನು ಇದೇ 15ಕ್ಕೆ ಮುಂದೂಡಿತು.</p>.<p>ಈ ಪ್ರಕರಣದ ವಿಚಾರಣೆ ನಡೆಸಿದ್ದ ಕೇರಳ ಹೈಕೋರ್ಟ್, ‘ಜನಪ್ರತಿನಿಧಿಗಳ ನಡತೆ ಸದನದ ಘನತೆಗೆ ತಕ್ಕುದಾಗಿರಬೇಕು ಇಲ್ಲದಿದ್ದಲ್ಲಿ ಪರಿಣಾಮವನ್ನು ಎದುರಿಸಬೇಕು’ ಎಂದು ಮಾರ್ಚ್ 12ರಂದು ನೀಡಿದ ಆದೇಶದಲ್ಲಿ ಹೇಳಿತ್ತು.</p>.<p>ಈ ಘಟನೆಗೆ ಸಂಬಂಧಿಸಿದಂತೆ, ದೂರು ದಾಖಲಿಸಿದ ವಿಧಾನ ಸಮರ್ಪಕವಾಗಿಲ್ಲ. ಸಭಾಧ್ಯಕ್ಷರ ಅನುಮತಿ ಇಲ್ಲದೇ ಪ್ರಕರಣ ದಾಖಲಿಸಲಾಗಿದೆ ಎಂಬುದು ರಾಜ್ಯ ಸರ್ಕಾರದ ವಾದ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಸದನದಲ್ಲಿ ಶಾಸಕರು ಹಾಗೂ ಸಂಸದರ ಅಶಿಸ್ತಿನ ವರ್ತನೆಯನ್ನು ಕ್ಷಮಿಸಲಾಗದು ಎಂದಿರುವ ಸುಪ್ರೀಂ ಕೋರ್ಟ್, ಸದನದಲ್ಲಿನ ಸಾರ್ವಜನಿಕ ಆಸ್ತಿಗೆ ಹಾನಿ ಮಾಡಿದ್ದಲ್ಲಿ ಅವರು ವಿಚಾರಣೆಯನ್ನೂ ಎದುರಿಸಬೇಕು ಎಂದು ಸೋಮವಾರ ಹೇಳಿದೆ.</p>.<p>ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್ ಮತ್ತು ಎಂ.ಆರ್. ಶಾ ಅವರನ್ನು ಒಳಗೊಂಡ ನ್ಯಾಯಪೀಠ, ‘ಶಾಸಕಾಂಗ ಸಂಸ್ಥೆಗಳಲ್ಲಿ ಶಿಷ್ಟಾಚಾರ ಪಾಲನೆ ಆಗಲೇಬೇಕು’ ಎಂದು ಕೇರಳ ಸರ್ಕಾರದ ಪರವಾಗಿ ಹಾಜರಿದ್ದ ಹಿರಿಯ ವಕೀಲ ರಂಜಿತ್ ಕುಮಾರ್ ಅವರಿಗೆ ತಿಳಿಸಿತು.</p>.<p>ಕೇರಳ ವಿಧಾನಸಭೆಯಲ್ಲಿ 2015ರಲ್ಲಿ ನಡೆದ ಗದ್ದಲ ಹಾಗೂ ಪೀಠೋಪಕರಣಗಳನ್ನು ಧ್ವಂಸಗೊಳಿಸಿದ ಪ್ರಕರಣದಲ್ಲಿ, ಈಗಿನ ಶಿಕ್ಷಣ ಸಚಿವ ವಿ.ಶಿವನ್ಕುಟ್ಟಿ ಸೇರಿದಂತೆ ಸಿಪಿಎಂ ಮುಖಂಡರ ವಿರುದ್ಧದ ಪ್ರಕರಣ ಕೈಬಿಡುವಂತೆ ಕೋರಿ ಕೇರಳ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆಯನ್ನು ನ್ಯಾಯಪೀಠ ನಡೆಸಿತು.</p>.<p>ಆರೋಪ ಎದುರಿಸುತ್ತಿರುವ ಸದಸ್ಯರು ಆಗ ವಿರೋಧ ಪಕ್ಷದಲ್ಲಿದ್ದರು.</p>.<p>‘ಮಸೂದೆಯೊಂದರ ಮೇಲೆ ಚರ್ಚೆ ನಡೆಯುತ್ತಿರುವಾಗ, ಶಾಸಕರು ಎನ್ನಿಸಿಕೊಂಡವರು ಮೈಕ್ ಕಿತ್ತೆಸೆದು, ಪೀಠೋಪಕರಣಗಳನ್ನು ಧ್ವಂಸ ಮಾಡಿದ್ದಾರೆ. ಅವರ ಈ ವರ್ತನೆ ಅಕ್ಷಮ್ಯ’ ಎಂದು ನ್ಯಾಯಪೀಠ ಹೇಳಿದೆ.</p>.<p>‘ಸಾರ್ವಜನಿಕರ ಎದುರು ಯಾವ ವರ್ತನೆಯನ್ನು ನೀವು ಸಮರ್ಥಿಸಿಕೊಳ್ಳಲು ಹೊರಟಿದ್ದೀರಿ? ತುಂಬಾ ಪ್ರಮುಖವಾದ ಬಜೆಟ್ ಮಂಡನೆ ಸಂದರ್ಭದಲ್ಲಿ ಗಲಾಟೆ ನಡೆಸಿದ ಈ ನಡವಳಿಕೆಯ ಹಿಂದೆ ಯಾವ ಸಾರ್ವಜನಿಕ ಹಿತಾಸಕ್ತಿ ಇದೆ?’ ಎಂದು ವಕೀಲರನ್ನು ತರಾಟೆಗೆ ತೆಗೆದುಕೊಂಡಿತು.</p>.<p>ಪ್ರಕರಣವನ್ನು ವಾಪಸ್ ತೆಗೆದುಕೊಳ್ಳುವುದು ಪಬ್ಲಿಕ್ ಪ್ರಾಸಿಕ್ಯೂಟರ್ ನಿರ್ಧಾರವೇ ಹೊರತು ರಾಜ್ಯ ಸರ್ಕಾರದ್ದಲ್ಲ ಎಂದು ಚಾಟಿ ಬೀಸಿದ ಪೀಠ, ಹೆಚ್ಚುವರಿ ದಾಖಲೆಗಳೊಂದಿಗೆ ಬರುವಂತೆ ಆದೇಶಿಸಿ ವಿಚಾರಣೆಯನ್ನು ಇದೇ 15ಕ್ಕೆ ಮುಂದೂಡಿತು.</p>.<p>ಈ ಪ್ರಕರಣದ ವಿಚಾರಣೆ ನಡೆಸಿದ್ದ ಕೇರಳ ಹೈಕೋರ್ಟ್, ‘ಜನಪ್ರತಿನಿಧಿಗಳ ನಡತೆ ಸದನದ ಘನತೆಗೆ ತಕ್ಕುದಾಗಿರಬೇಕು ಇಲ್ಲದಿದ್ದಲ್ಲಿ ಪರಿಣಾಮವನ್ನು ಎದುರಿಸಬೇಕು’ ಎಂದು ಮಾರ್ಚ್ 12ರಂದು ನೀಡಿದ ಆದೇಶದಲ್ಲಿ ಹೇಳಿತ್ತು.</p>.<p>ಈ ಘಟನೆಗೆ ಸಂಬಂಧಿಸಿದಂತೆ, ದೂರು ದಾಖಲಿಸಿದ ವಿಧಾನ ಸಮರ್ಪಕವಾಗಿಲ್ಲ. ಸಭಾಧ್ಯಕ್ಷರ ಅನುಮತಿ ಇಲ್ಲದೇ ಪ್ರಕರಣ ದಾಖಲಿಸಲಾಗಿದೆ ಎಂಬುದು ರಾಜ್ಯ ಸರ್ಕಾರದ ವಾದ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>