<p><strong>ಲಖನೌ:</strong> ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಮತ್ತು ಪಕ್ಷದ ಹಿರಿಯ ಮುಖಂಡ ಆಜಂ ಖಾನ್ ನಡುವೆ ಮನಸ್ತಾಪ ಉಂಟಾಗಿದೆ ಎಂಬ ಊಹಾಪೋಹದ ನಡುವೆ ಉತ್ತರ ಪ್ರದೇಶದ ವಿಧಾನಸಭೆಯ ಕಲಾಪಕ್ಕೆ ಎರಡನೇ ದಿನವಾದ ಮಂಗಳವಾರ ಕೂಡ ಆಜಂ ಖಾನ್ ಗೈರಾದರು.</p>.<p>ಸೋಮವಾರ ಸದನ ಆರಂಭಕ್ಕೂ ಮುನ್ನ ಸ್ಪೀಕರ್ ಸತೀಶ್ ಮಹನ್ ಅವರ ಕೊಠಡಿಯಲ್ಲಿ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಆಜಂ ಖಾನ್, ವಿಧಾನಸಭೆ ಕಾರ್ಯ ಕಲಾಪಕ್ಕೆ ಹಾಜರಾಗದೆ ದೂರ ಉಳಿದಿದ್ದರು.</p>.<p>ಭೂ ಕಬಳಿಕೆ ಸೇರಿದಂತೆ ಹಲವು ಪ್ರಕರಣದಲ್ಲಿ ಜೈಲು ಸೇರಿದ್ದ ಆಜಂ ಖಾನ್ ಇತ್ತೀಚಿಗೆ ಸೀತಾಪುರ ಕಾರಾಗೃಹದಿಂದ ಬಿಡುಗಡೆಯಾಗಿದ್ದರು.</p>.<p>ಅಧಿವೇಶನದಲ್ಲಿ ಆಜಂ ಖಾನ್ ಭಾಗವಹಿಸಲಿದ್ದಾರೆಯೇ ಎಂಬ ಪ್ರಶ್ನೆಗೆ ಅವರ ಪುತ್ರ ಅಬ್ದುಲ್ ಆಜಂ ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದರು.</p>.<p>ಆಜಂ ಖಾನ್ ಸೋಮವಾರ ಸಂಜೆ ಪ್ರಗತಿಶೀಲ ಸಮಾಜವಾದಿ ಪಾರ್ಟಿ ಲೊಹಿಯಾ(ಪಿಎಸ್ಪಿಎಲ್) ಸಂಸ್ಥಾಪಕ ಶಿವಪಾಲ್ ಯಾದವ್ ಅವರನ್ನು ಭೇಟಿಯಾಗಿ ಹಲವು ವಿಚಾರಗಳ ಕುರಿತು ಚರ್ಚಿಸಿದರು. ಈ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಆಜಂ ಖಾನ್ ಅವರು ತಮ್ಮ ವಕೀಲ ಕಬೀಲ್ ಸಿಬಿಲ್ಗೆ ಎಸ್ಪಿಯಿಂದ ರಾಜ್ಯಸಭಾಗೆ ಟಿಕೆಟ್ ಕೊಡಿಸಲು ಪ್ರಯತ್ನಿಸಿದ್ದರು ಎಂದು ಹೇಳಲಾಗುತ್ತಿದೆ. ಆದರೆ ಈ ವಿಚಾರದ ಬಗ್ಗೆ ಆಜಂ ಖಾನ್ ಮತ್ತು ಎಸ್ಪಿ ನಾಯಕರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.</p>.<p>ಇತ್ತೀಚಿಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ 111 ಕ್ಷೇತ್ರಗಳಲ್ಲಿ ಜಯ ಸಾಧಿಸಿರುವ ಎಸ್ಪಿ ಜುಲೈನಲ್ಲಿ ರಾಜ್ಯಸಭೆಯಲ್ಲಿ ತೆರವುಗೊಳ್ಳಲಿರುವ 11 ಸ್ಥಾನಕ್ಕೆ ಮೂವರನ್ನು ಆಯ್ಕೆ ಮಾಡಬಹುದಾಗಿದೆ. ಮಂಗಳವಾರ ರಾಜ್ಯಸಭೆಯ ಚುನಾವಣೆಯ ಪ್ರಕ್ರಿಯೆ ಆರಂಭವಾಗಿದೆ.</p>.<p>ಕಪಿಲ್ ಸಿಬಲ್ ಹಲವು ವರ್ಷಗಳಿಂದ ಸುಪ್ರೀಂಕೋರ್ಟ್ನಲ್ಲಿ ಆಜಂ ಖಾನ್ ಪರ ವಕೀಲರಾಗಿದ್ದು, ಎಸ್ಪಿ ಬೆಂಬಲದೊಂದಿಗೆ 2016ರಲ್ಲಿ ಕಾಂಗ್ರೆಸ್ನಿಂದ ಟಿಕೆಟ್ ಪಡೆದು ಉತ್ತರ ಪ್ರದೇಶದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಮತ್ತು ಪಕ್ಷದ ಹಿರಿಯ ಮುಖಂಡ ಆಜಂ ಖಾನ್ ನಡುವೆ ಮನಸ್ತಾಪ ಉಂಟಾಗಿದೆ ಎಂಬ ಊಹಾಪೋಹದ ನಡುವೆ ಉತ್ತರ ಪ್ರದೇಶದ ವಿಧಾನಸಭೆಯ ಕಲಾಪಕ್ಕೆ ಎರಡನೇ ದಿನವಾದ ಮಂಗಳವಾರ ಕೂಡ ಆಜಂ ಖಾನ್ ಗೈರಾದರು.</p>.<p>ಸೋಮವಾರ ಸದನ ಆರಂಭಕ್ಕೂ ಮುನ್ನ ಸ್ಪೀಕರ್ ಸತೀಶ್ ಮಹನ್ ಅವರ ಕೊಠಡಿಯಲ್ಲಿ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಆಜಂ ಖಾನ್, ವಿಧಾನಸಭೆ ಕಾರ್ಯ ಕಲಾಪಕ್ಕೆ ಹಾಜರಾಗದೆ ದೂರ ಉಳಿದಿದ್ದರು.</p>.<p>ಭೂ ಕಬಳಿಕೆ ಸೇರಿದಂತೆ ಹಲವು ಪ್ರಕರಣದಲ್ಲಿ ಜೈಲು ಸೇರಿದ್ದ ಆಜಂ ಖಾನ್ ಇತ್ತೀಚಿಗೆ ಸೀತಾಪುರ ಕಾರಾಗೃಹದಿಂದ ಬಿಡುಗಡೆಯಾಗಿದ್ದರು.</p>.<p>ಅಧಿವೇಶನದಲ್ಲಿ ಆಜಂ ಖಾನ್ ಭಾಗವಹಿಸಲಿದ್ದಾರೆಯೇ ಎಂಬ ಪ್ರಶ್ನೆಗೆ ಅವರ ಪುತ್ರ ಅಬ್ದುಲ್ ಆಜಂ ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದರು.</p>.<p>ಆಜಂ ಖಾನ್ ಸೋಮವಾರ ಸಂಜೆ ಪ್ರಗತಿಶೀಲ ಸಮಾಜವಾದಿ ಪಾರ್ಟಿ ಲೊಹಿಯಾ(ಪಿಎಸ್ಪಿಎಲ್) ಸಂಸ್ಥಾಪಕ ಶಿವಪಾಲ್ ಯಾದವ್ ಅವರನ್ನು ಭೇಟಿಯಾಗಿ ಹಲವು ವಿಚಾರಗಳ ಕುರಿತು ಚರ್ಚಿಸಿದರು. ಈ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಆಜಂ ಖಾನ್ ಅವರು ತಮ್ಮ ವಕೀಲ ಕಬೀಲ್ ಸಿಬಿಲ್ಗೆ ಎಸ್ಪಿಯಿಂದ ರಾಜ್ಯಸಭಾಗೆ ಟಿಕೆಟ್ ಕೊಡಿಸಲು ಪ್ರಯತ್ನಿಸಿದ್ದರು ಎಂದು ಹೇಳಲಾಗುತ್ತಿದೆ. ಆದರೆ ಈ ವಿಚಾರದ ಬಗ್ಗೆ ಆಜಂ ಖಾನ್ ಮತ್ತು ಎಸ್ಪಿ ನಾಯಕರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.</p>.<p>ಇತ್ತೀಚಿಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ 111 ಕ್ಷೇತ್ರಗಳಲ್ಲಿ ಜಯ ಸಾಧಿಸಿರುವ ಎಸ್ಪಿ ಜುಲೈನಲ್ಲಿ ರಾಜ್ಯಸಭೆಯಲ್ಲಿ ತೆರವುಗೊಳ್ಳಲಿರುವ 11 ಸ್ಥಾನಕ್ಕೆ ಮೂವರನ್ನು ಆಯ್ಕೆ ಮಾಡಬಹುದಾಗಿದೆ. ಮಂಗಳವಾರ ರಾಜ್ಯಸಭೆಯ ಚುನಾವಣೆಯ ಪ್ರಕ್ರಿಯೆ ಆರಂಭವಾಗಿದೆ.</p>.<p>ಕಪಿಲ್ ಸಿಬಲ್ ಹಲವು ವರ್ಷಗಳಿಂದ ಸುಪ್ರೀಂಕೋರ್ಟ್ನಲ್ಲಿ ಆಜಂ ಖಾನ್ ಪರ ವಕೀಲರಾಗಿದ್ದು, ಎಸ್ಪಿ ಬೆಂಬಲದೊಂದಿಗೆ 2016ರಲ್ಲಿ ಕಾಂಗ್ರೆಸ್ನಿಂದ ಟಿಕೆಟ್ ಪಡೆದು ಉತ್ತರ ಪ್ರದೇಶದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>