ಬರೀಲಿ ಜಿಲ್ಲೆಯ ಓಲ್ನಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿದ್ದ ಅವರು, ಉತ್ತರ ಪ್ರದೇಶದಲ್ಲಿ ಗೂಂಡಾ ರಾಜ್ಯ ಕೊನೆಗಾಣಿಸುವುದಾಗಿ 2017ರಲ್ಲಿ ಬಿಜೆಪಿಯ ಅಧ್ಯಕ್ಷ ಆಗಿದ್ದ ಸಮಯದಲ್ಲಿ ಭರವಸೆ ನೀಡಿದ್ದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಆ ಭರವಸೆಗಳನ್ನು ಈಡೇರಿಸಿದ್ದಾರೆ. ಮಾಫಿಯಾಗಳು ರಾಜ್ಯದಲ್ಲಿ ಕಾಣಿಸುತ್ತಿಲ್ಲ. ಆಜಂ ಖಾನ್, ಅತಿಕ್ ಅಹ್ಮದ್ ಮತ್ತು ಮುಕ್ತಾರ್ ಅನ್ಸಾರಿ ಈಗ ಜೈಲಿನಲ್ಲಿ ಇದ್ದಾರೆ ಎಂದು ಅವರು ಹೇಳಿದರು.