ಶ್ರೀಕೃಷ್ಣ ಜನ್ಮಭೂಮಿಗೆ ಸಂಬಂಧಿಸಿ ಹೋರಾಟ ಮಾಡಲು ಬಿಜೆಪಿ ಮುಂದಾಗಿದ್ದರೂ ಮಥುರಾ ಕ್ಷೇತ್ರವು ಬಿಜೆಪಿಗೆ ಸುರಕ್ಷಿತವಲ್ಲ. ಏಕೆಂದರೆ, ಮಥುರಾದಲ್ಲಿ ಗಣನೀಯ ಸಂಖ್ಯೆಯ ಬ್ರಾಹ್ಮಣ ಮತದಾರರಿದ್ದಾರೆ. ಕಾಂಗ್ರೆಸ್ ಮುಖಂಡ ಪ್ರದೀಪ್ ಮಥುರಾ ಅವರು ಈ ಕ್ಷೇತ್ರದಲ್ಲಿ ಭಾರಿ ಜನಪ್ರಿಯತೆ ಹೊಂದಿದ್ದಾರೆ. ಅಲ್ಲದೆ, ಈ ಹಿಂದೆ ಹಲವು ಬಾರಿ ಅವರು ಈ ಕ್ಷೇತ್ರದಲ್ಲಿ ಗೆದ್ದಿದ್ದಾರೆ.