<p><strong>ಪ್ರಯಾಗರಾಜ್:</strong> ಉತ್ತರ ಪ್ರದೇಶದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ, ಇಲ್ಲಿನ ರಸ್ತೆ ನಿರ್ಮಾಣ ಯೋಜನೆಗಳಿಗಾಗಿಕೇಂದ್ರ ಸರ್ಕಾರವು ಮುಂದಿನ ಐದು ವರ್ಷಗಳಲ್ಲಿ ₹ 5 ಲಕ್ಷ ಕೋಟಿ ವಿನಿಯೋಗಿಸಲಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.</p>.<p>ಜಗದೀಶ್ಪುರ, ಬಾಬುಗಂಜ್, ಉಂಚಹಾರ್, ಅಲ್ಲಾಪುರ್ನಲ್ಲಿ ಬೈಪಾಸ್ ರಸ್ತೆ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಗಡ್ಕರಿ, 'ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೇರಿದರೆ, ಮುಂದಿನ ಐದು ವರ್ಷಗಳಲ್ಲಿ ಉತ್ತರ ಪ್ರದೇಶದ ರಸ್ತೆ ಯೋಜನೆಗಳಿಗಾಗಿ₹ 5 ಲಕ್ಷ ಕೋಟಿ ಹೂಡಿಕೆ ಮಾಡಲಾಗುವುದು. ರಾಜ್ಯದ ರಸ್ತೆಗಳನ್ನು ಅಮೆರಿಕದ ರಸ್ತೆಗಳಷ್ಟು ಉತ್ತಮವಾಗಿ ನಿರ್ಮಿಸುತ್ತೇವೆ' ಎಂದು ಭರವಸೆ ನೀಡಿದ್ದಾರೆ.</p>.<p>ಮುಂದುವರಿದು, 'ಯೋಗಿ ಆದಿತ್ಯನಾಥ ಮತ್ತು ಕೇಶವ್ ಪ್ರಸಾದ್ ಮೌರ್ಯ ಅವರ ನೇತೃತ್ವದಲ್ಲಿ ಮುಂಬರುವ ಚುನಾವಣೆ ವೇಳೆ ಡಬಲ್ ಎಂಜಿನ್ ಸರ್ಕಾರಕ್ಕೆ ಮತ ನೀಡಿ. ಉತ್ತರ ಪ್ರದೇಶವನ್ನು ಅಮೆರಿಕದ ರಾಜ್ಯಗಳಂತೆ ಅಭಿವೃದ್ಧಿಪಡಿಸುತ್ತೇವೆ' ಎಂದು ಹೇಳಿಕೊಂಡಿದ್ದಾರೆ.</p>.<p>ಎಲ್ಲ ಹಳ್ಳಿಗಳನ್ನುರಸ್ತೆಗಳು ಮತ್ತು ಹೆದ್ದಾರಿಗಳೊಂದಿಗೆ ಸಂಪರ್ಕಿಸಬೇಕು ಎಂಬುದು ಮಾಜಿ ಪ್ರಧಾನಿ ದಿ. ಅಟಲ್ ಬಿಹಾರಿ ವಾಜಪೇಯಿ ಅವರ ಕನಸಾಗಿತ್ತು ಎಂದೂ ತಿಳಿಸಿದ್ದಾರೆ.</p>.<p>403 ಸದಸ್ಯ ಬಲದ ಉತ್ತರ ಪ್ರದೇಶ ವಿಧಾನಸಭೆಗೆ ಮುಂದಿನ ವರ್ಷ ಚುನಾವಣೆ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪ್ರಯಾಗರಾಜ್:</strong> ಉತ್ತರ ಪ್ರದೇಶದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ, ಇಲ್ಲಿನ ರಸ್ತೆ ನಿರ್ಮಾಣ ಯೋಜನೆಗಳಿಗಾಗಿಕೇಂದ್ರ ಸರ್ಕಾರವು ಮುಂದಿನ ಐದು ವರ್ಷಗಳಲ್ಲಿ ₹ 5 ಲಕ್ಷ ಕೋಟಿ ವಿನಿಯೋಗಿಸಲಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.</p>.<p>ಜಗದೀಶ್ಪುರ, ಬಾಬುಗಂಜ್, ಉಂಚಹಾರ್, ಅಲ್ಲಾಪುರ್ನಲ್ಲಿ ಬೈಪಾಸ್ ರಸ್ತೆ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಗಡ್ಕರಿ, 'ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೇರಿದರೆ, ಮುಂದಿನ ಐದು ವರ್ಷಗಳಲ್ಲಿ ಉತ್ತರ ಪ್ರದೇಶದ ರಸ್ತೆ ಯೋಜನೆಗಳಿಗಾಗಿ₹ 5 ಲಕ್ಷ ಕೋಟಿ ಹೂಡಿಕೆ ಮಾಡಲಾಗುವುದು. ರಾಜ್ಯದ ರಸ್ತೆಗಳನ್ನು ಅಮೆರಿಕದ ರಸ್ತೆಗಳಷ್ಟು ಉತ್ತಮವಾಗಿ ನಿರ್ಮಿಸುತ್ತೇವೆ' ಎಂದು ಭರವಸೆ ನೀಡಿದ್ದಾರೆ.</p>.<p>ಮುಂದುವರಿದು, 'ಯೋಗಿ ಆದಿತ್ಯನಾಥ ಮತ್ತು ಕೇಶವ್ ಪ್ರಸಾದ್ ಮೌರ್ಯ ಅವರ ನೇತೃತ್ವದಲ್ಲಿ ಮುಂಬರುವ ಚುನಾವಣೆ ವೇಳೆ ಡಬಲ್ ಎಂಜಿನ್ ಸರ್ಕಾರಕ್ಕೆ ಮತ ನೀಡಿ. ಉತ್ತರ ಪ್ರದೇಶವನ್ನು ಅಮೆರಿಕದ ರಾಜ್ಯಗಳಂತೆ ಅಭಿವೃದ್ಧಿಪಡಿಸುತ್ತೇವೆ' ಎಂದು ಹೇಳಿಕೊಂಡಿದ್ದಾರೆ.</p>.<p>ಎಲ್ಲ ಹಳ್ಳಿಗಳನ್ನುರಸ್ತೆಗಳು ಮತ್ತು ಹೆದ್ದಾರಿಗಳೊಂದಿಗೆ ಸಂಪರ್ಕಿಸಬೇಕು ಎಂಬುದು ಮಾಜಿ ಪ್ರಧಾನಿ ದಿ. ಅಟಲ್ ಬಿಹಾರಿ ವಾಜಪೇಯಿ ಅವರ ಕನಸಾಗಿತ್ತು ಎಂದೂ ತಿಳಿಸಿದ್ದಾರೆ.</p>.<p>403 ಸದಸ್ಯ ಬಲದ ಉತ್ತರ ಪ್ರದೇಶ ವಿಧಾನಸಭೆಗೆ ಮುಂದಿನ ವರ್ಷ ಚುನಾವಣೆ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>