ಸದನ ಆರಂಭವಾಗುತ್ತಿದ್ದಂತೆ ಕಾನೂನು ಸುವ್ಯವಸ್ಥೆ, ರೈತರು ಹಾಗೂ ಅತ್ಯಾಚಾರ ಘಟನೆಗೆ ಸಂಬಂಧಿಸಿದ ಫಲಕಗಳನ್ನು ಹಿಡಿದು, ಸದನದ ಬಾವಿಗೆ ಧುಮುಕಿದ ಎಸ್ಪಿ ಸದಸ್ಯರು, ‘ರಾಜ್ಯಪಾಲರೇ ವಾಪಸ್ ಹೋಗಿ’ ಎಂಬ ಘೋಷಣೆಗಳನ್ನು ಕೂಗಿದರು. ಆದಾಗ್ಯೂ, ರಾಜ್ಯಪಾಲೆ ಆನಂದಿಬೆನ್ ಪಟೇಲ್ ಅವರು, 15 ನಿಮಿಷಗಳ ಕಾಲ ತಮ್ಮ ಭಾಷಣವನ್ನು ಓದಿ ಮುಗಿಸಿದರು.