<p class="title"><strong>ಬಂದಾ/ಫತೇಪುರ್:</strong>ಉತ್ತರಪ್ರದೇಶದ ಬಂದಾ ಜಿಲ್ಲೆಯ ಯಮುನಾ ನದಿಯಲ್ಲಿ ಗುರುವಾರ ಸಂಭವಿಸಿದ ದೋಣಿ ದುರಂತಕ್ಕೆ ಸಂಬಂಧಿಸಿದಂತೆ ಮತ್ತೆ ಏಳು ಮೃತದೇಹಗಳನ್ನು ಹೊರ ತೆಗೆಯಲಾಗಿದ್ದು, ಮೃತರ ಸಂಖ್ಯೆ 10ಕ್ಕೇ ಏರಿಕೆಯಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.</p>.<p class="title">ದುರಂತದಲ್ಲಿ 17 ಜನರು ಕೊಚ್ಚಿಕೊಂಡು ಹೋಗಿರುವ ಸಾಧ್ಯತೆ ಇದೆ.</p>.<p class="title">‘ಶವಗಳನ್ನು ಗುರುತಿಸುವ ಕಾರ್ಯ ನಡೆಯುತ್ತಿದೆ. ಘಟನೆ ನಡೆದ 15–20 ಕಿ.ಮೀದೂರದಲ್ಲಿ ಶವಗಳು ಪತ್ತೆಯಾಗಿವೆ’ ಎಂದು ಕೃಷ್ಣಾಪುರ ಪೊಲೀಸ್ ಠಾಣೆ ಠಾಣಾಧಿಕಾರಿ ಸಂಜಯ್ ತಿವಾರಿ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.</p>.<p class="title"><strong>ಇದನ್ನೂ ಓದಿ:</strong><a href="https://www.prajavani.net/india-news/banda-boat-tragedy-and-nearly-25-missing-3-bodies-fished-out-search-operation-on-962804.html" itemprop="url" target="_blank">ದೋಣಿ ದುರಂತ: 32 ಮಂದಿ ನಾಪತ್ತೆ </a></p>.<p class="title">30ಕ್ಕೂ ಹೆಚ್ಚು ಜನರನ್ನು ಹೊತ್ತ ದೋಣಿಯು ಮಾರ್ಕಾದಿಂದ ಫತೇಪುರ್ ಜಿಲ್ಲೆಯ ಜರೌಲಿ ಘಾಟ್ ಕಡೆಗೆ ಸಾಗುತ್ತಿದ್ದಾಗ ಬಲವಾದ ಗಾಳಿಗೆ ಭಾರಿ ಅಲೆಗಳು ಎದ್ದು ದೋಣಿ ಮಗುಚಿತ್ತು. 13 ಮಂದಿ ಈಜಿ ದಡ ಸೇರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಬಂದಾ/ಫತೇಪುರ್:</strong>ಉತ್ತರಪ್ರದೇಶದ ಬಂದಾ ಜಿಲ್ಲೆಯ ಯಮುನಾ ನದಿಯಲ್ಲಿ ಗುರುವಾರ ಸಂಭವಿಸಿದ ದೋಣಿ ದುರಂತಕ್ಕೆ ಸಂಬಂಧಿಸಿದಂತೆ ಮತ್ತೆ ಏಳು ಮೃತದೇಹಗಳನ್ನು ಹೊರ ತೆಗೆಯಲಾಗಿದ್ದು, ಮೃತರ ಸಂಖ್ಯೆ 10ಕ್ಕೇ ಏರಿಕೆಯಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.</p>.<p class="title">ದುರಂತದಲ್ಲಿ 17 ಜನರು ಕೊಚ್ಚಿಕೊಂಡು ಹೋಗಿರುವ ಸಾಧ್ಯತೆ ಇದೆ.</p>.<p class="title">‘ಶವಗಳನ್ನು ಗುರುತಿಸುವ ಕಾರ್ಯ ನಡೆಯುತ್ತಿದೆ. ಘಟನೆ ನಡೆದ 15–20 ಕಿ.ಮೀದೂರದಲ್ಲಿ ಶವಗಳು ಪತ್ತೆಯಾಗಿವೆ’ ಎಂದು ಕೃಷ್ಣಾಪುರ ಪೊಲೀಸ್ ಠಾಣೆ ಠಾಣಾಧಿಕಾರಿ ಸಂಜಯ್ ತಿವಾರಿ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.</p>.<p class="title"><strong>ಇದನ್ನೂ ಓದಿ:</strong><a href="https://www.prajavani.net/india-news/banda-boat-tragedy-and-nearly-25-missing-3-bodies-fished-out-search-operation-on-962804.html" itemprop="url" target="_blank">ದೋಣಿ ದುರಂತ: 32 ಮಂದಿ ನಾಪತ್ತೆ </a></p>.<p class="title">30ಕ್ಕೂ ಹೆಚ್ಚು ಜನರನ್ನು ಹೊತ್ತ ದೋಣಿಯು ಮಾರ್ಕಾದಿಂದ ಫತೇಪುರ್ ಜಿಲ್ಲೆಯ ಜರೌಲಿ ಘಾಟ್ ಕಡೆಗೆ ಸಾಗುತ್ತಿದ್ದಾಗ ಬಲವಾದ ಗಾಳಿಗೆ ಭಾರಿ ಅಲೆಗಳು ಎದ್ದು ದೋಣಿ ಮಗುಚಿತ್ತು. 13 ಮಂದಿ ಈಜಿ ದಡ ಸೇರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>