ಲಖನೌ: ವಿವಾಹದ ಸಲುವಾಗಿ ನಡೆಯುವ ಧಾರ್ಮಿಕ ಮತಾಂತರವನ್ನು ತಡೆಯುವ ಕಾನೂನನ್ನು ಬಿಗಿಗೊಳಿಸುವ ಕರಡನ್ನು ಉತ್ತರ ಪ್ರದೇಶ ಸರ್ಕಾರ ಮಂಗಳವಾರ ಅಂಗೀಕರಿಸಿದೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ಸುಗ್ರೀವಾಜ್ಞೆಗೆ ಅನುಮೋದನೆ ನೀಡಲಾಗಿದೆ ಎಂದು ಅಧಿಕೃತ ವಕ್ತಾರರು ತಿಳಿಸಿದ್ದಾರೆ. ಈ ಕುರಿತು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
UP Cabinet decides to introduce an ordinance against unlawful religious conversions: State Cabinet Minister Siddharth Nath Singh pic.twitter.com/vUPO7SLyR7
ಕಾನೂನುಬಾಹಿರ ಧಾರ್ಮಿಕ ಮತಾಂತರಗಳ ವಿರುದ್ಧ ಸುಗ್ರೀವಾಜ್ಞೆ ತರಲು ಉತ್ತರ ಪ್ರದೇಶ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಉತ್ತರ ಪ್ರದೇಶ ಸಚಿವ ಸಿದ್ಧಾರ್ಥನಾಥ ಸಿಂಗ್ ತಿಳಿಸಿದ್ದಾರೆ.
ಮದುವೆ ಉದ್ದೇಶದ ಮತಾಂತರಕ್ಕೆ ಬಿಜೆಪಿ 'ಲವ್ ಜಿಹಾದ್' ಎಂಬ ಹೆಸರಿಟ್ಟಿದೆ.