ಗಾಜಿಯಾಬಾದ್: ಇಲ್ಲಿನ ಮುರಾದ್ನಗರ ಪ್ರದೇಶದಲ್ಲಿಶವಸಂಸ್ಕಾರಕ್ಕೆ ತೆರಳಿದ್ದವರ ಮೇಲೆ ಛಾವಣಿ ಕುಸಿದು 25 ಜನರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಾಗರಿಕ ಯೋಜನೆಗಳ ಕಳಪೆ ನಿರ್ವಹಣೆಯ ಫಲವಾಗಿ ಈ ದುರಂತ ನಡೆದಿದ್ದು, ತಪ್ಪಿತಸ್ಥರಿಗೆ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿಯಲ್ಲಿ ಶಿಕ್ಷೆಯಾಗಲಿದೆ ಎಂದುಹೇಳಿದ್ದಾರೆ.