ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಪ್ರದೇಶ: ಕೇಸು ದಾಖಲಿಸಬೇಕಾದರೆ ರವಿಕೆ ಹರಿದುಕೊಂಡು ಬನ್ನಿ ಎಂದ ಪೊಲೀಸ್

Last Updated 15 ಸೆಪ್ಟೆಂಬರ್ 2020, 14:10 IST
ಅಕ್ಷರ ಗಾತ್ರ

ಕಾನ್ಪುರ್: ವ್ಯಕ್ತಿಯೊಬ್ಬರು ತಮ್ಮ ಜಮೀನು ಕಬಳಿಸಿದ್ದಾರೆ ಎಂದು ದೂರು ನೀಡಲು ಪೊಲೀಸ್ ಠಾಣೆಗೆ ಬಂದ ಮಹಿಳೆಯೊಬ್ಬರಲ್ಲಿ 'ನಿಮ್ಮ ರವಿಕೆ ಹರಿದುಕೊಂಡು ಬನ್ನಿ, ಅತ್ಯಾಚಾರ ಪ್ರಕರಣ ದಾಖಲಿಸುತ್ತೇನೆ' ಎಂದು ಹೇಳಿದ ಪೊಲೀಸ್ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ.

ಉತ್ತರ ಪ್ರದೇಶದ ಕಾನ್ಪುರ್ ನಗರದಿಂದ ಸುಮಾರು 90 ಕಿ.ಮೀ ದೂರದಲ್ಲಿರುವ ನರವಲ್ ಪೊಲೀಸ್ ಠಾಣೆಯ ಉಸ್ತುವಾರಿ ವಹಿಸಿದ್ದ ರಾಮ್ ಆತುರ್ ಅಮಾನತುಗೊಂಡಿರುವ ಪೊಲೀಸ್ ಠಾಣಾಧಿಕಾರಿ. ರಾಮ್ ಆತುರ್ ಮಹಿಳೆಯ ಜತೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂಬ ಆರೋಪವೂ ಇದೆ. ಪ್ರಸ್ತುತ ಘಟನೆ ಬಗ್ಗೆ ತನಿಖೆ ನಡೆದು ಬರುತ್ತಿದೆ ಎಂದು ಮೂಲಗಳು ತಿಳಿಸಿವೆ.

ಮಹಿಳೆಯಲ್ಲಿ ರವಿಕೆ ಹರಿದುಕೊಂಡು ಬನ್ನಿ ಎಂದು ಎಸ್‌ಎಚ್‌ಒ ಹೇಳಿರುವ ವಿಡಿಯೊ ಮಂಗಳವಾರ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ನಂತರ ಈ ಘಟನೆ ಬೆಳಕಿಗೆ ಬಂದಿದೆ.

'ಅಗ್‌ಲೀ ಬಾರ್ ಬ್ಲೌಸ್ ಫಾಡ್ ಕೇ ಆನಾ...ಮೇ ದುಷ್ಕರ್ಮ್ ಕಾ ಕೇಸ್ ದರ್ಜ್ ಕರೂಂಗಾ' (ಮುಂದಿನ ಬಾರಿ ರವಿಕೆ ಹರಿದುಕೊಂಡು ಬನ್ನಿ, ನಾನು ಅತ್ಯಾಚಾರ ಪ್ರಕರಣ ದಾಖಲಿಸುವೆ) ಎಂದು ಪೊಲೀಸ್ ಹೇಳುತ್ತಿರುವುದು ವಿಡಿಯೊದಲ್ಲಿದೆ.

ಈ ರೀತಿಯ ವರ್ತನೆ ಸಹಿಸುವುದಿಲ್ಲ.ತನಿಖೆಗೆ ಆದೇಶ ನೀಡಲಾಗಿದೆ, ಪೊಲೀಸ್ ವಿರುದ್ಧ ನಾವು ಕ್ರಮ ಕೈಗೊಳ್ಳುತ್ತೇವೆ ಎಂದು ಕಾನ್ಪುರದ ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT