ಲಖನೌ:ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಲೋಕಸಭೆಯಲ್ಲಿ ಪ್ರತಿನಿಧಿಸುವ ವಾರಾಣಸಿ ಜಿಲ್ಲೆಯ, ವಾರಾಣಸಿ ಕಂಟೋನ್ಮೆಂಟ್ ಮತ್ತು ವಾರಾಣಸಿ ಉತ್ತರ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಆದರೆ, ವಾರಾಣಸಿ ದಕ್ಷಿಣ ವಿಧಾನಸಭೆಯಲ್ಲಿ ಹಿನ್ನಡೆ ಅನುಭವಿಸಿದೆ.
ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ನೀಲಕಂಠ ತಿವಾರಿ ಅವರು2017ರ ಚುನಾವಣೆಯಲ್ಲಿ ಗೆದ್ದು ಯೋಗಿ ಸಂಪುಟದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದರು. ಆದರೆ, ಈ ಬಾರಿ ಸಮಾಜವಾದಿ ಪಕ್ಷದ (ಎಸ್ಪಿ) ಅಭ್ಯರ್ಥಿ ಕಿಶನ್ ದೀಕ್ಷಿತ್ ಎದುರು 6,146 ಮತಗಳಿಂದ ಹಿನ್ನಡೆ ಅನುಭವಿಸಿದ್ದಾರೆ.
ತಿವಾರಿ ವಿರುದ್ಧ ಆಡಳಿತ ವಿರೋಧಿ ಅಲೆ ಇದ್ದ ಹೊರತಾಗಿಯೂ, ಅವರ ಗೆಲುವಿಗಾಗಿ ಆರ್ಎಸ್ಎಸ್ ಭಾರಿ ಪ್ರಯತ್ನ ನಡೆಸಿತ್ತು ಎಂದು ಮೂಲಗಳು ತಿಳಿಸಿವೆ.