<p><strong>ಲಖನೌ:</strong> ‘ಗುಜ್ಜಾರ್’ ಸಮುದಾಯದ ಪ್ರಭಾವಿ ನಾಯಕ ಅವತಾರ್ ಸಿಂಗ್ ಭಡನ ಬಿಜೆಪಿ ತೊರೆದಿದ್ದು, ಬುಧವಾರ ರಾಷ್ಟ್ರೀಯ ಲೋಕ ದಳ (ಆರ್ಎಲ್ಡಿ) ಸೇರಿದ್ದಾರೆ. ಇದರೊಂದಿಗೆ ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಮತ್ತೊಂದು ಹಿನ್ನಡೆಯಾಗಿದೆ.</p>.<p>ಬಿಜೆಪಿ ತೊರೆಯುವ ನಿರ್ಧಾರ ಪ್ರಕಟಿಸಿದ ಬೆನ್ನಲ್ಲೇ ಭಡನ ಅವರು ದೆಹಲಿಯಲ್ಲಿ ಆರ್ಎಲ್ಡಿ ಅಧ್ಯಕ್ಷ ಜಯಂತ್ ಚೌಧರಿ ಜತೆ ಮಾತುಕತೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>ಮುಜಫ್ಫರ್ನಗರದ ಮೀರ್ಪುರ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಭಡನ ಆರ್ಎಲ್ಡಿ ಚಿಹ್ನೆಯಡಿ ಜೇವಾರ್ ಕ್ಷೇತ್ರದಿಂದ ಕಣಕ್ಕಿಳಿಯುವ ಸಾಧ್ಯತೆ ಇದೆ ಎಂದೂ ಮೂಲಗಳು ಹೇಳಿವೆ. ಸಮಾಜವಾದಿ ಪಕ್ಷದ ಜತೆ (ಎಸ್ಪಿ) ಆರ್ಎಲ್ಡಿ ಮೈತ್ರಿ ಮಾಡಿಕೊಂಡಿದೆ.</p>.<p><a href="https://www.prajavani.net/india-news/uttar-pradesh-assembly-election-2022-bjp-minister-dara-singh-chauhan-resigns-from-yogi-cabinet-901311.html" itemprop="url">ಉ.ಪ್ರದೇಶದಲ್ಲಿ ಬಿಜೆಪಿಗೆ ಮತ್ತೊಂದು ಆಘಾತ: ಸಚಿವ ದಾರಾ ಸಿಂಗ್ ಚೌಹಾಣ್ ರಾಜೀನಾಮೆ </a></p>.<p>‘ಗುಜ್ಜಾರ್’ ಸಮುದಾಯದ ಪ್ರಭಾವಿ ನಾಯಕ ಎಂದು ಪರಿಗಣಿಸಲಾಗಿರುವ ಭಡನ ಅವರು ರೈತರ ಪ್ರತಿಭಟನೆಯನ್ನು ನಿಭಾಯಿಸಿದ ವಿಚಾರದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜತೆ ಭಿನ್ನಾಭಿಪ್ರಾಯ ಹೊಂದಿದ್ದರು.</p>.<p>ಈ ಮಧ್ಯೆ, ಭಡನ ಅವರನ್ನು ಪಕ್ಷಕ್ಕೆ ಸ್ವಾಗತಿಸಿರುವ ಜಯಂತ್ ಚೌಧರಿ, ಇದರಿಂದ ಪಶ್ಚಿಮ ಉತ್ತರ ಪ್ರದೇಶ ಭಾಗದಲ್ಲಿ ಪಕ್ಷವನ್ನು ಇನ್ನಷ್ಟು ಬಲಪಡಿಸಬಹುದು ಎಂದು ಹೇಳಿದ್ದಾರೆ.</p>.<p>ಬಿಜೆಪಿಯು ಪಶ್ಚಿಮ ಉತ್ತರ ಪ್ರದೇಶದಲ್ಲಿ ಪ್ರಭಾವಿ ‘ಜಾಟ್’ ಸಮುದಾಯದ ವಿರೋಧ ಎದುರಿಸುತ್ತಿರುವ ಸಂದರ್ಭದಲ್ಲೇ ಗುಜ್ಜಾರ್ ನಾಯಕ ಕೂಡ ಪಕ್ಷದಿಂದ ನಿರ್ಗಮಿಸಿದ್ದಾರೆ. ಪಶ್ಚಿಮ ಉತ್ತರ ಪ್ರದೇಶದಲ್ಲಿ, ಫೆಬ್ರುವರಿ 10ರಂದು ಮೊದಲ ಹಂತದಲ್ಲೇ ಚುನಾವಣೆ ನಡೆಯಲಿದೆ.</p>.<p><strong><a href="https://www.prajavani.net/india-news/uttar-pradesh-assembly-election-2022-bjp-facing-major-trouble-of-leaders-immigration-901190.html" target="_blank">ವಿಧಾನಸಭೆ ಚುನಾವಣೆ 2022: ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ‘ವಲಸೆ’ ಬಿಸಿ</a></strong></p>.<p>ಕಳೆದ 24 ಗಂಟೆ ಅವಧಿಯಲ್ಲಿ ಬಿಜೆಪಿ ತ್ಯಜಿಸಿದ ನಾಲ್ಕನೇ ನಾಯಕರಾಗಿದ್ದಾರೆ ಭಡನ. ಸಚಿವ ಸ್ವಾಮಿ ಪ್ರಸಾದ್ ಮೌರ್ಯ ಮಂಗಳವಾರ ಪಕ್ಷ ತೊರೆದಿದ್ದರು. ಬಿಜೆಪಿ ಶಾಸಕರಾದ ರೋಶನ್ ಲಾಲ್ ವರ್ಮಾ, ಬ್ರಿಜೇಶ್ ಪ್ರಜಾಪತಿ ಹಾಗೂ ಭಗವತಿ ಸಾಗರ್ ಕೂಡ ಪಕ್ಷ ತ್ಯಜಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ‘ಗುಜ್ಜಾರ್’ ಸಮುದಾಯದ ಪ್ರಭಾವಿ ನಾಯಕ ಅವತಾರ್ ಸಿಂಗ್ ಭಡನ ಬಿಜೆಪಿ ತೊರೆದಿದ್ದು, ಬುಧವಾರ ರಾಷ್ಟ್ರೀಯ ಲೋಕ ದಳ (ಆರ್ಎಲ್ಡಿ) ಸೇರಿದ್ದಾರೆ. ಇದರೊಂದಿಗೆ ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಮತ್ತೊಂದು ಹಿನ್ನಡೆಯಾಗಿದೆ.</p>.<p>ಬಿಜೆಪಿ ತೊರೆಯುವ ನಿರ್ಧಾರ ಪ್ರಕಟಿಸಿದ ಬೆನ್ನಲ್ಲೇ ಭಡನ ಅವರು ದೆಹಲಿಯಲ್ಲಿ ಆರ್ಎಲ್ಡಿ ಅಧ್ಯಕ್ಷ ಜಯಂತ್ ಚೌಧರಿ ಜತೆ ಮಾತುಕತೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>ಮುಜಫ್ಫರ್ನಗರದ ಮೀರ್ಪುರ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಭಡನ ಆರ್ಎಲ್ಡಿ ಚಿಹ್ನೆಯಡಿ ಜೇವಾರ್ ಕ್ಷೇತ್ರದಿಂದ ಕಣಕ್ಕಿಳಿಯುವ ಸಾಧ್ಯತೆ ಇದೆ ಎಂದೂ ಮೂಲಗಳು ಹೇಳಿವೆ. ಸಮಾಜವಾದಿ ಪಕ್ಷದ ಜತೆ (ಎಸ್ಪಿ) ಆರ್ಎಲ್ಡಿ ಮೈತ್ರಿ ಮಾಡಿಕೊಂಡಿದೆ.</p>.<p><a href="https://www.prajavani.net/india-news/uttar-pradesh-assembly-election-2022-bjp-minister-dara-singh-chauhan-resigns-from-yogi-cabinet-901311.html" itemprop="url">ಉ.ಪ್ರದೇಶದಲ್ಲಿ ಬಿಜೆಪಿಗೆ ಮತ್ತೊಂದು ಆಘಾತ: ಸಚಿವ ದಾರಾ ಸಿಂಗ್ ಚೌಹಾಣ್ ರಾಜೀನಾಮೆ </a></p>.<p>‘ಗುಜ್ಜಾರ್’ ಸಮುದಾಯದ ಪ್ರಭಾವಿ ನಾಯಕ ಎಂದು ಪರಿಗಣಿಸಲಾಗಿರುವ ಭಡನ ಅವರು ರೈತರ ಪ್ರತಿಭಟನೆಯನ್ನು ನಿಭಾಯಿಸಿದ ವಿಚಾರದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜತೆ ಭಿನ್ನಾಭಿಪ್ರಾಯ ಹೊಂದಿದ್ದರು.</p>.<p>ಈ ಮಧ್ಯೆ, ಭಡನ ಅವರನ್ನು ಪಕ್ಷಕ್ಕೆ ಸ್ವಾಗತಿಸಿರುವ ಜಯಂತ್ ಚೌಧರಿ, ಇದರಿಂದ ಪಶ್ಚಿಮ ಉತ್ತರ ಪ್ರದೇಶ ಭಾಗದಲ್ಲಿ ಪಕ್ಷವನ್ನು ಇನ್ನಷ್ಟು ಬಲಪಡಿಸಬಹುದು ಎಂದು ಹೇಳಿದ್ದಾರೆ.</p>.<p>ಬಿಜೆಪಿಯು ಪಶ್ಚಿಮ ಉತ್ತರ ಪ್ರದೇಶದಲ್ಲಿ ಪ್ರಭಾವಿ ‘ಜಾಟ್’ ಸಮುದಾಯದ ವಿರೋಧ ಎದುರಿಸುತ್ತಿರುವ ಸಂದರ್ಭದಲ್ಲೇ ಗುಜ್ಜಾರ್ ನಾಯಕ ಕೂಡ ಪಕ್ಷದಿಂದ ನಿರ್ಗಮಿಸಿದ್ದಾರೆ. ಪಶ್ಚಿಮ ಉತ್ತರ ಪ್ರದೇಶದಲ್ಲಿ, ಫೆಬ್ರುವರಿ 10ರಂದು ಮೊದಲ ಹಂತದಲ್ಲೇ ಚುನಾವಣೆ ನಡೆಯಲಿದೆ.</p>.<p><strong><a href="https://www.prajavani.net/india-news/uttar-pradesh-assembly-election-2022-bjp-facing-major-trouble-of-leaders-immigration-901190.html" target="_blank">ವಿಧಾನಸಭೆ ಚುನಾವಣೆ 2022: ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ‘ವಲಸೆ’ ಬಿಸಿ</a></strong></p>.<p>ಕಳೆದ 24 ಗಂಟೆ ಅವಧಿಯಲ್ಲಿ ಬಿಜೆಪಿ ತ್ಯಜಿಸಿದ ನಾಲ್ಕನೇ ನಾಯಕರಾಗಿದ್ದಾರೆ ಭಡನ. ಸಚಿವ ಸ್ವಾಮಿ ಪ್ರಸಾದ್ ಮೌರ್ಯ ಮಂಗಳವಾರ ಪಕ್ಷ ತೊರೆದಿದ್ದರು. ಬಿಜೆಪಿ ಶಾಸಕರಾದ ರೋಶನ್ ಲಾಲ್ ವರ್ಮಾ, ಬ್ರಿಜೇಶ್ ಪ್ರಜಾಪತಿ ಹಾಗೂ ಭಗವತಿ ಸಾಗರ್ ಕೂಡ ಪಕ್ಷ ತ್ಯಜಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>