ಬಿಜ್ನೋರ್: ತ್ರಿವರ್ಣ ಧ್ವಜ ವಿತರಣೆ ಮಾಡಿದ ಕುಟುಂಬದವರಿಗೆ ಜೀವ ಬೆದರಿಕೆಯೊಡ್ಡಿರುವ ಘಟನೆ ಉತ್ತರ ಪ್ರದೇಶದ ಬಿಜ್ನೋರ್ ಬಳಿ ನಡೆದಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಶಶಿ ಎಂಬ ಮಹಿಳೆ ಮತ್ತು ಆಕೆಯ ಪತಿ ಅರುಣ್ ಎಂಬುವವರು ತ್ರಿವರ್ಣ ಧ್ವಜ ವಿತರಣೆ ಮಾಡಿದ್ದರು. ಅವರ ಮನೆ ಹೊರಗೆ ಅಪರಿಚಿತ ವ್ಯಕ್ತಿ ಜೀವ ಬೆದರಿಕೆ ಪತ್ರ ಅಂಟಿಸಿದ್ದಾನೆ ಎಂದು ಹೆಚ್ಚುವರಿ ಎಸ್ಪಿ ಪ್ರವೀಣ್ ರಂಜನ್ ಸಿಂಗ್ ಹೇಳಿದ್ದಾರೆ.