<p><strong>ಭಾಗ್ಪತ್ (ಉ. ಪ್ರದೇಶ):</strong> ಆಟವಾಡುತ್ತಿದ್ದ ವೇಳೆ ಕಾರಿನಲ್ಲಿ ಸಿಕ್ಕಿಬಿದ್ದ ನಾಲ್ವರು ಮಕ್ಕಳು ಉಸಿರುಗಟ್ಟಿ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಉತ್ತರ ಪ್ರದೇಶದಿಂದ ವರದಿಯಾಗಿದೆ.</p>.<p>ಘಟನೆಯಲ್ಲಿ ಓರ್ವ ಬಾಲಕನನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p>.<p>ಚಾಂದಿನಗರ ಪ್ರದೇಶದ ಸಿಂಗೌಲಿ ಟಾಗಾ ಗ್ರಾಮದಲ್ಲಿ ಅನಿಲ್ ತ್ಯಾಗಿ ಎಂಬವರ ಮನೆಯ ಹೊರಗಡೆ ಪಾರ್ಕ್ ಮಾಡಲಾಗಿದ್ದ ಕಾರಿನೊಳಗೆ ಐವರು ಮಕ್ಕಳು ಆಟವಾಡುತ್ತಿದ್ದರು. ಆಕಸ್ಮಾತ್ ಕಾರ್ ಲಾಕ್ ಆದ ಕಾರಣ ಮಕ್ಕಳು ಕಾರಿನೊಳಗೆ ಸಿಕ್ಕಿಬಿದ್ದಿದ್ದಾರೆ. ಬಳಿಕ ಉಸಿರಾಡಲು ಸಾಧ್ಯವಾಗದೆ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.</p>.<p>ಮೃತಪಟ್ಟ ಮಕ್ಕಳನ್ನು ನಿಯತಿ (8), ವಂದನಾ (8), ಅಕ್ಷಯ್ (4), ಕೃಷ್ಣ (7) ಮತ್ತು ಶಿವಾಂಶ್ (8) ಎಂದು ಗುರುತಿಸಲಾಗಿದೆ. ಶಿವಾಂಶ್ ಹೊರತುಪಡಿಸಿ ಇತರೆಲ್ಲರು ಸ್ಥಳದಲ್ಲೇ ಮೃತಪಟ್ಟಿದ್ದರು.</p>.<p>ಕಾರು ಮಾಲೀಕನ ಕ್ರೂರ ನಡೆಯಿಂದಾಗಿ ಈ ಅವಘಡ ಸಂಭವಿಸಿದೆ ಎಂದು ನೆರೆಹೊರೆಯವರು ಆರೋಪಿಸಿದ್ದಾರೆ. ಘಟನೆ ಬಗ್ಗೆ ಪೂಲೀಸರು ತನಿಖೆ ನಡೆಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಾಗ್ಪತ್ (ಉ. ಪ್ರದೇಶ):</strong> ಆಟವಾಡುತ್ತಿದ್ದ ವೇಳೆ ಕಾರಿನಲ್ಲಿ ಸಿಕ್ಕಿಬಿದ್ದ ನಾಲ್ವರು ಮಕ್ಕಳು ಉಸಿರುಗಟ್ಟಿ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಉತ್ತರ ಪ್ರದೇಶದಿಂದ ವರದಿಯಾಗಿದೆ.</p>.<p>ಘಟನೆಯಲ್ಲಿ ಓರ್ವ ಬಾಲಕನನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p>.<p>ಚಾಂದಿನಗರ ಪ್ರದೇಶದ ಸಿಂಗೌಲಿ ಟಾಗಾ ಗ್ರಾಮದಲ್ಲಿ ಅನಿಲ್ ತ್ಯಾಗಿ ಎಂಬವರ ಮನೆಯ ಹೊರಗಡೆ ಪಾರ್ಕ್ ಮಾಡಲಾಗಿದ್ದ ಕಾರಿನೊಳಗೆ ಐವರು ಮಕ್ಕಳು ಆಟವಾಡುತ್ತಿದ್ದರು. ಆಕಸ್ಮಾತ್ ಕಾರ್ ಲಾಕ್ ಆದ ಕಾರಣ ಮಕ್ಕಳು ಕಾರಿನೊಳಗೆ ಸಿಕ್ಕಿಬಿದ್ದಿದ್ದಾರೆ. ಬಳಿಕ ಉಸಿರಾಡಲು ಸಾಧ್ಯವಾಗದೆ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.</p>.<p>ಮೃತಪಟ್ಟ ಮಕ್ಕಳನ್ನು ನಿಯತಿ (8), ವಂದನಾ (8), ಅಕ್ಷಯ್ (4), ಕೃಷ್ಣ (7) ಮತ್ತು ಶಿವಾಂಶ್ (8) ಎಂದು ಗುರುತಿಸಲಾಗಿದೆ. ಶಿವಾಂಶ್ ಹೊರತುಪಡಿಸಿ ಇತರೆಲ್ಲರು ಸ್ಥಳದಲ್ಲೇ ಮೃತಪಟ್ಟಿದ್ದರು.</p>.<p>ಕಾರು ಮಾಲೀಕನ ಕ್ರೂರ ನಡೆಯಿಂದಾಗಿ ಈ ಅವಘಡ ಸಂಭವಿಸಿದೆ ಎಂದು ನೆರೆಹೊರೆಯವರು ಆರೋಪಿಸಿದ್ದಾರೆ. ಘಟನೆ ಬಗ್ಗೆ ಪೂಲೀಸರು ತನಿಖೆ ನಡೆಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>