ಮೇನ್ಪುರಿ ಕ್ಷೇತ್ರದಿಂದಲೋಕಸಭೆ ಆಯ್ಕೆಯಾಗಿದ್ದ ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್ ನಿಧನದಿಂದ ಈ ಸ್ಥಾನ ತೆರವಾಗಿತ್ತು. ರಾಂಪುರ್ ಸರ್ದಾರ್ ಮತ್ತು ಕಟೌಲಿ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿದ್ದ ಎಸ್ಪಿ ಶಾಸಕ ಅಜಂ ಖಾನ್ ಮತ್ತು ಬಿಜೆಪಿ ಶಾಸಕ ವಿಕ್ರಂ ಸಿಂಗ್ ಸೈನಿವಿವಿಧ ಪ್ರಕರಣಗಳಲ್ಲಿ ಶಿಕ್ಷೆಗೊಳಪಟ್ಟಿದ್ದು ಅವರ ಸದಸ್ಯತ್ವ ರದ್ದಾಗಿದ್ದು, ಈ ಕ್ಷೇತ್ರಗಳು ತೆರವಾಗಿವೆ.