<p><strong>ಲಖನೌ:</strong> ಕಾಗದ ರಹಿತ ಬಜೆಟ್ ಅಧಿವೇಶನ ನಡೆಸಲು ಸಿದ್ಧತೆ ಮಾಡಿಕೊಳ್ಳುತ್ತಿರುವ ಉತ್ತರ ಪ್ರದೇಶ ಸರ್ಕಾರ, ರಾಜ್ಯ ವಿಧಾನಸಭೆ ಮತ್ತು ವಿಧಾನ ಪರಿಷತ್ ಸದಸ್ಯರಿಗೆ ಟ್ಯಾಬ್ಲೆಟ್ಗಳನ್ನು ಖರೀದಿಸುವಂತೆ ತಿಳಿಸಿದೆ.</p>.<p>ರಾಜ್ಯದಲ್ಲಿ 403 ವಿಧಾನಸಭಾ ಸದಸ್ಯರು ಮತ್ತು 100 ವಿಧಾನ ಪರಿಷತ್ ಸದಸ್ಯರಿದ್ದಾರೆ. ಪ್ರತಿ ಶಾಸಕರಿಗೆ ಆಪಲ್ ಐಪಾಡ್ ಖರೀದಿಸಲು ಸರ್ಕಾರ ₹50 ಸಾವಿರ ಹಣ ನೀಡುತ್ತಿದೆ ಎಂದು ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ಹೊಂದಿರುವ ಉಪ ಮುಖ್ಯಮಂತ್ರಿ ದಿನೇಶ್ ಶರ್ಮಾ ತಿಳಿಸಿದ್ದಾರೆ.</p>.<p>‘ಶಾಸಕರು ಆಪಲ್ ಐಪಾಡ್ ಖರೀದಿಸಬೇಕು. ಅದರ ವೆಚ್ಚವನ್ನು ಮರುಪಾವತಿ ಮಾಡಲಾಗುವುದು‘ ಎಂದು ಅವರು ತಿಳಿಸಿದ್ದಾರೆ.</p>.<p>ಐಪಾಡ್ ಬಳಸುವ ಕುರಿತು ಸಚಿವರು ಈಗಾಗಲೇ ತರಬೇತಿಗೆ ಹಾಜರಾಗಿದ್ದಾರೆ. ಅಧಿವೇಶನಕ್ಕೆ ಮುನ್ನ ಶಾಸಕರು ಮತ್ತು ವಿಧಾನಪರಿಷತ್ ಸದಸ್ಯರಿಗೂ ತರಬೇತಿ ಕೊಡಿಸಲಾಗುವುದು ಎಂದು ಅವರು ಹೇಳಿದರು.</p>.<p>ಫೆಬ್ರವರಿ 2 ರಂದು ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಭವಿಷ್ಯದಲ್ಲಿ ವರ್ಚುವಲ್ ಆಗಿ ಸಂಪುಟ ಸಭೆ ನಡೆಸಬೇಕು. ಇದಕ್ಕಾಗಿ ಸಚಿವರಿಗೆ ತರಬೇತಿ ನೀಡಬೇಕು‘ ಎಂದು ನಿರ್ದೇಶನ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ಕಾಗದ ರಹಿತ ಬಜೆಟ್ ಅಧಿವೇಶನ ನಡೆಸಲು ಸಿದ್ಧತೆ ಮಾಡಿಕೊಳ್ಳುತ್ತಿರುವ ಉತ್ತರ ಪ್ರದೇಶ ಸರ್ಕಾರ, ರಾಜ್ಯ ವಿಧಾನಸಭೆ ಮತ್ತು ವಿಧಾನ ಪರಿಷತ್ ಸದಸ್ಯರಿಗೆ ಟ್ಯಾಬ್ಲೆಟ್ಗಳನ್ನು ಖರೀದಿಸುವಂತೆ ತಿಳಿಸಿದೆ.</p>.<p>ರಾಜ್ಯದಲ್ಲಿ 403 ವಿಧಾನಸಭಾ ಸದಸ್ಯರು ಮತ್ತು 100 ವಿಧಾನ ಪರಿಷತ್ ಸದಸ್ಯರಿದ್ದಾರೆ. ಪ್ರತಿ ಶಾಸಕರಿಗೆ ಆಪಲ್ ಐಪಾಡ್ ಖರೀದಿಸಲು ಸರ್ಕಾರ ₹50 ಸಾವಿರ ಹಣ ನೀಡುತ್ತಿದೆ ಎಂದು ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ಹೊಂದಿರುವ ಉಪ ಮುಖ್ಯಮಂತ್ರಿ ದಿನೇಶ್ ಶರ್ಮಾ ತಿಳಿಸಿದ್ದಾರೆ.</p>.<p>‘ಶಾಸಕರು ಆಪಲ್ ಐಪಾಡ್ ಖರೀದಿಸಬೇಕು. ಅದರ ವೆಚ್ಚವನ್ನು ಮರುಪಾವತಿ ಮಾಡಲಾಗುವುದು‘ ಎಂದು ಅವರು ತಿಳಿಸಿದ್ದಾರೆ.</p>.<p>ಐಪಾಡ್ ಬಳಸುವ ಕುರಿತು ಸಚಿವರು ಈಗಾಗಲೇ ತರಬೇತಿಗೆ ಹಾಜರಾಗಿದ್ದಾರೆ. ಅಧಿವೇಶನಕ್ಕೆ ಮುನ್ನ ಶಾಸಕರು ಮತ್ತು ವಿಧಾನಪರಿಷತ್ ಸದಸ್ಯರಿಗೂ ತರಬೇತಿ ಕೊಡಿಸಲಾಗುವುದು ಎಂದು ಅವರು ಹೇಳಿದರು.</p>.<p>ಫೆಬ್ರವರಿ 2 ರಂದು ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಭವಿಷ್ಯದಲ್ಲಿ ವರ್ಚುವಲ್ ಆಗಿ ಸಂಪುಟ ಸಭೆ ನಡೆಸಬೇಕು. ಇದಕ್ಕಾಗಿ ಸಚಿವರಿಗೆ ತರಬೇತಿ ನೀಡಬೇಕು‘ ಎಂದು ನಿರ್ದೇಶನ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>