ಲಖನೌ: ‘ಹಾಥರಸ್ ಅತ್ಯಾಚಾರ ಪ್ರಕರಣದಲ್ಲಿ ಉತ್ತರ ಪ್ರದೇಶ ಸರ್ಕಾರದ ಅಸಲಿ ಉದ್ದೇಶ ಬಹಿರಂಗವಾಗಿದೆ. ಸಮಾಜವಾದಿ ಪಕ್ಷದ ನಾಯಕ ಆಜಂ ಖಾನ್ ವಿರುದ್ಧದ ಸುಳ್ಳು ಪ್ರಕರಣಗಳಲ್ಲೂ ಸರ್ಕಾರವು ಇಂತಹದ್ದೇ ಪರಿಸ್ಥಿತಿಯನ್ನು ಎದುರಿಸಲಿದೆ’ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಸೋಮವಾರ ತಿಳಿಸಿದರು.