<p><strong>ಲಖನೌ:</strong> ಯಾವುದೇ ಹೊಸ ಮದರಾಸಗಳಿಗೆ ಸರ್ಕಾರಿ ಅನುದಾನ ನೀಡದಿರಲು ಉತ್ತರ ಪ್ರದೇಶ ಸರ್ಕಾರದ ಸಚಿವ ಸಂಪುಟವು ನಿರ್ಧರಿಸಿದೆ.</p>.<p>‘ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ನೇತೃತ್ವದಲ್ಲಿ ಮಂಗಳವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈಗಾಗಲೇ ಸರ್ಕಾರದಿಂದ ಅನುದಾನ ಪಡೆಯುತ್ತಿರುವ ಮದರಾಸಗಳಿಗೆ ಅದನ್ನು ಮುಂದುವರಿಸಲಾಗುವುದು. ಆದರೆ, ಯಾವುದೇ ಹೊಸ ಫಲಾನುಭವಿಗಳ ಹೆಸರನ್ನು ಪಟ್ಟಿಯಲ್ಲಿ ಸೇರಿಸಲಾಗುವುದಿಲ್ಲ’ ಎಂದು ಉತ್ತರ ಪ್ರದೇಶದ ಅಲ್ಪಸಂಖ್ಯಾತರ ಕಲ್ಯಾಣ ರಾಜ್ಯಸಚಿವ ಡಾನಿಷ್ ಅಜಾದ್ ಅನ್ಸಾರಿ ಅವರು ಬುಧವಾರ ತಿಳಿಸಿದ್ದಾರೆ.</p>.<p>‘ಪ್ರಸ್ತುತ ಉತ್ತರ ಪ್ರದೇಶದಲ್ಲಿ 560 ಮದರಾಸಗಳಿಗೆ ಸರ್ಕಾರದಿಂದ ಅನುದಾನ ನೀಡಲಾಗುತ್ತಿದೆ. ಇದು ದೊಡ್ಡ ಸಂಖ್ಯೆಯಾಗಿದೆ. ಮದರಾಸಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣವನ್ನು ಒದಗಿಸುವುದು ಸರ್ಕಾರದ ಉದ್ದೇಶ. ಹಾಗಾಗಿ, ಯಾವುದೇ ಹೊಸ ಮದರಾಸಗಳಿಗೆ ಅನುದಾನ ನೀಡದಿರಲು ನಿರ್ಧರಿಸಲಾಗಿದೆ’ ಎಂದು ಅವರು ತಿಳಿಸಿದ್ದಾರೆ.</p>.<p>ಪ್ರಸ್ತುತ ಉತ್ತರ ಪ್ರದೇಶದಲ್ಲಿ16,461 ಮದರಾಸಗಳಿವೆ. ಅದರಲ್ಲಿ 560 ಮದರಾಸಗಳಿಗೆ ಸರ್ಕಾರದಿಂದ ಅನುದಾನ ನೀಡಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ಯಾವುದೇ ಹೊಸ ಮದರಾಸಗಳಿಗೆ ಸರ್ಕಾರಿ ಅನುದಾನ ನೀಡದಿರಲು ಉತ್ತರ ಪ್ರದೇಶ ಸರ್ಕಾರದ ಸಚಿವ ಸಂಪುಟವು ನಿರ್ಧರಿಸಿದೆ.</p>.<p>‘ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ನೇತೃತ್ವದಲ್ಲಿ ಮಂಗಳವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈಗಾಗಲೇ ಸರ್ಕಾರದಿಂದ ಅನುದಾನ ಪಡೆಯುತ್ತಿರುವ ಮದರಾಸಗಳಿಗೆ ಅದನ್ನು ಮುಂದುವರಿಸಲಾಗುವುದು. ಆದರೆ, ಯಾವುದೇ ಹೊಸ ಫಲಾನುಭವಿಗಳ ಹೆಸರನ್ನು ಪಟ್ಟಿಯಲ್ಲಿ ಸೇರಿಸಲಾಗುವುದಿಲ್ಲ’ ಎಂದು ಉತ್ತರ ಪ್ರದೇಶದ ಅಲ್ಪಸಂಖ್ಯಾತರ ಕಲ್ಯಾಣ ರಾಜ್ಯಸಚಿವ ಡಾನಿಷ್ ಅಜಾದ್ ಅನ್ಸಾರಿ ಅವರು ಬುಧವಾರ ತಿಳಿಸಿದ್ದಾರೆ.</p>.<p>‘ಪ್ರಸ್ತುತ ಉತ್ತರ ಪ್ರದೇಶದಲ್ಲಿ 560 ಮದರಾಸಗಳಿಗೆ ಸರ್ಕಾರದಿಂದ ಅನುದಾನ ನೀಡಲಾಗುತ್ತಿದೆ. ಇದು ದೊಡ್ಡ ಸಂಖ್ಯೆಯಾಗಿದೆ. ಮದರಾಸಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣವನ್ನು ಒದಗಿಸುವುದು ಸರ್ಕಾರದ ಉದ್ದೇಶ. ಹಾಗಾಗಿ, ಯಾವುದೇ ಹೊಸ ಮದರಾಸಗಳಿಗೆ ಅನುದಾನ ನೀಡದಿರಲು ನಿರ್ಧರಿಸಲಾಗಿದೆ’ ಎಂದು ಅವರು ತಿಳಿಸಿದ್ದಾರೆ.</p>.<p>ಪ್ರಸ್ತುತ ಉತ್ತರ ಪ್ರದೇಶದಲ್ಲಿ16,461 ಮದರಾಸಗಳಿವೆ. ಅದರಲ್ಲಿ 560 ಮದರಾಸಗಳಿಗೆ ಸರ್ಕಾರದಿಂದ ಅನುದಾನ ನೀಡಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>