ಮಧ್ಯಪ್ರದೇಶದ ಪನ್ನಾ ಜಿಲ್ಲೆಯಲ್ಲಿ ಗೋಶಾಲೆಯಲ್ಲಿನ 50 ಹಸುಗಳು ಮತ್ತು ಜಾನುವಾರುಗಳನ್ನು ಜೀವಂತ ಸಮಾಧಿ ಮಾಡಲಾಗಿದೆ ಎಂದು ನರೈನಿ ಕ್ಷೇತ್ರದ ಬಿಜೆಪಿ ಶಾಸಕ ರಾಜ್ಕರನ್ ಕಬೀರ್ ಆರೋಪಿಸಿದ್ದರು. ಅಲ್ಲದೆ ಕಾರ್ಯನಿರ್ವಾಹಕ ಅಧಿಕಾರಿಯನ್ನು ಬಲಿಪಶು ಮಾಡಲಾಗಿದ್ದು, ಹಗರಣದಲ್ಲಿ ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್ ಶಾಮೀಲಾಗಿದ್ದಾರೆ ಎಂದು ಹೇಳಿದ್ದಾರೆ.
ನರೈನಿನಲ್ಲಿರುವ ತಾತ್ಕಾಲಿಕ ಗೋಶಾಲೆಯಿಂದ 134 ಹಸುಗಳು ಮತ್ತು ಜಾನುವಾರುಗಳನ್ನು ಇತರೆ ನಾಲ್ಕು ತಾತ್ಕಾಲಿಕ ಗೋಶಾಲೆಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅನುರಾಗ್ ಪಟೇಲ್ ಶನಿವಾರ ಹೇಳಿದ್ದರು. ಸೋಮವಾರ ಈ ಪ್ರಾಣಿಗಳನ್ನು ಮಧ್ಯಪ್ರದೇಶದ ಕಾಡಿನಲ್ಲಿ ಜೀವಂತ ಸಮಾಧಿ ಮಾಡಿರುವ ಕುರಿತು ಪತ್ರಿಕೆಯೊಂದರಲ್ಲಿ ವರದಿ ಪ್ರಕಟವಾಗಿತ್ತು.