<p><strong>ಅಲಹಾಬಾದ್ (ಉತ್ತರ ಪ್ರದೇಶ):</strong>‘ಅಮಾನತುಗೊಂಡಿರುವ ಮಕ್ಕಳ ವೈದ್ಯ ಡಾ.ಕಫೀಲ್ ಖಾನ್ ವಿರುದ್ಧದ ಇಲಾಖಾ ಮರು ವಿಚಾರಣೆಯ ಆದೇಶವನ್ನು ಹಿಂಪಡೆಯಲಾಗಿದೆ’ ಎಂದು ಉತ್ತರ ಪ್ರದೇಶ ಸರ್ಕಾರವು ಅಲಹಾಬಾದ್ ಹೈಕೋರ್ಟ್ಗೆ ತಿಳಿಸಿದೆ.</p>.<p>ಮಕ್ಕಳ ಸರಣಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಡಾ.ಕಫೀಲ್ ಖಾನ್ ವಿರುದ್ಧ ಇಲಾಖಾ ಮರು ವಿಚಾರಣೆ ನಡೆಸುವಂತೆ ಕಳೆದ ವರ್ಷ ಫೆಬ್ರುವರಿ 24ರಂದು ಆದೇಶಿಸಲಾಗಿತ್ತು.</p>.<p>‘ಡಾ.ಕಫೀಲ್ ಖಾನ್ ವಿರುದ್ಧ ಹೊರಡಿಸಲಾಗಿದ್ದ ಮರು ವಿಚಾರಣೆ ಆದೇಶವನ್ನು ಹಿಂಪಡೆಯಲಾಗಿದೆ’ ಎಂದು ಹೆಚ್ಚುವರಿ ಅಡ್ವೊಕೇಟ್ ಜನರಲ್ ಮನೀಶ್ ಗೋಯಲ್ ಶುಕ್ರವಾರ ಹೇಳಿದರು.</p>.<p>ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ಶಿಸ್ತಿನ ಪ್ರಕ್ರಿಯೆಗಳನ್ನು ಮೂರು ತಿಂಗಳೊಳಗೆ ಮುಕ್ತಾಯಗೊಳಿಸುವುದಾಗಿ ಮನೀಶ್ ಗೋಯಲ್ ಅವರು ನ್ಯಾಯಮೂರ್ತಿ ಯಶವಂತ್ ವರ್ಮಾ ಅವರಿಗೆ ತಿಳಿಸಿದರು.</p>.<p>ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಆಗಸ್ಟ್ 10ಕ್ಕೆ (ಮಂಗಳವಾರ) ನಿಗದಿ ಮಾಡಲಾಗಿದೆ.</p>.<p>ಪ್ರಕರಣಕ್ಕೆ ಸಂಬಂಧಿಸಿದ ಶಿಸ್ತು ಪ್ರಕ್ರಿಯೆಗಳು ಇನ್ನೂ ಅಂತ್ಯವಾಗಿಲ್ಲ. ಆದರೂ ಅಮಾನತುಗೊಳಿಸಲಾದ ಒಂಬತ್ತು ಮಂದಿಯ ಪೈಕಿ ಏಳು ಮಂದಿಯನ್ನು ಮತ್ತೆ ಕರ್ತವ್ಯಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.</p>.<p>ಡಾ. ಖಾನ್ ಅವರನ್ನು 2017ರ ಆಗಸ್ಟ್ 22ರಂದು ಅಮಾನತುಗೊಳಿಸಲಾಗಿದೆ. ಆದರೂ ಪ್ರಕರಣ ವಿಚಾರಣೆ ಇನ್ನೂ ಮುಗಿದಿಲ್ಲ ಎಂದು ಈ ವರ್ಷದ ಜುಲೈನಲ್ಲಿ ನ್ಯಾಯಾಲಯ ಹೇಳಿತ್ತು.</p>.<p>ಅಲ್ಲದೆ ಈ ಪ್ರಕರಣದ ವಿಚಾರಣೆಯನ್ನು ಮೂರು ತಿಂಗಳೊಳಗೆ ಮುಕ್ತಾಯಗೊಳಿಸಬೇಕು ಎಂದು 2019ರ ಮಾರ್ಚ್ 7 ರಂದೇ ನ್ಯಾಯಾಲಯವುರಾಜ್ಯ ಸರ್ಕಾರಕ್ಕೆ ಸೂಚಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಲಹಾಬಾದ್ (ಉತ್ತರ ಪ್ರದೇಶ):</strong>‘ಅಮಾನತುಗೊಂಡಿರುವ ಮಕ್ಕಳ ವೈದ್ಯ ಡಾ.ಕಫೀಲ್ ಖಾನ್ ವಿರುದ್ಧದ ಇಲಾಖಾ ಮರು ವಿಚಾರಣೆಯ ಆದೇಶವನ್ನು ಹಿಂಪಡೆಯಲಾಗಿದೆ’ ಎಂದು ಉತ್ತರ ಪ್ರದೇಶ ಸರ್ಕಾರವು ಅಲಹಾಬಾದ್ ಹೈಕೋರ್ಟ್ಗೆ ತಿಳಿಸಿದೆ.</p>.<p>ಮಕ್ಕಳ ಸರಣಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಡಾ.ಕಫೀಲ್ ಖಾನ್ ವಿರುದ್ಧ ಇಲಾಖಾ ಮರು ವಿಚಾರಣೆ ನಡೆಸುವಂತೆ ಕಳೆದ ವರ್ಷ ಫೆಬ್ರುವರಿ 24ರಂದು ಆದೇಶಿಸಲಾಗಿತ್ತು.</p>.<p>‘ಡಾ.ಕಫೀಲ್ ಖಾನ್ ವಿರುದ್ಧ ಹೊರಡಿಸಲಾಗಿದ್ದ ಮರು ವಿಚಾರಣೆ ಆದೇಶವನ್ನು ಹಿಂಪಡೆಯಲಾಗಿದೆ’ ಎಂದು ಹೆಚ್ಚುವರಿ ಅಡ್ವೊಕೇಟ್ ಜನರಲ್ ಮನೀಶ್ ಗೋಯಲ್ ಶುಕ್ರವಾರ ಹೇಳಿದರು.</p>.<p>ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ಶಿಸ್ತಿನ ಪ್ರಕ್ರಿಯೆಗಳನ್ನು ಮೂರು ತಿಂಗಳೊಳಗೆ ಮುಕ್ತಾಯಗೊಳಿಸುವುದಾಗಿ ಮನೀಶ್ ಗೋಯಲ್ ಅವರು ನ್ಯಾಯಮೂರ್ತಿ ಯಶವಂತ್ ವರ್ಮಾ ಅವರಿಗೆ ತಿಳಿಸಿದರು.</p>.<p>ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಆಗಸ್ಟ್ 10ಕ್ಕೆ (ಮಂಗಳವಾರ) ನಿಗದಿ ಮಾಡಲಾಗಿದೆ.</p>.<p>ಪ್ರಕರಣಕ್ಕೆ ಸಂಬಂಧಿಸಿದ ಶಿಸ್ತು ಪ್ರಕ್ರಿಯೆಗಳು ಇನ್ನೂ ಅಂತ್ಯವಾಗಿಲ್ಲ. ಆದರೂ ಅಮಾನತುಗೊಳಿಸಲಾದ ಒಂಬತ್ತು ಮಂದಿಯ ಪೈಕಿ ಏಳು ಮಂದಿಯನ್ನು ಮತ್ತೆ ಕರ್ತವ್ಯಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.</p>.<p>ಡಾ. ಖಾನ್ ಅವರನ್ನು 2017ರ ಆಗಸ್ಟ್ 22ರಂದು ಅಮಾನತುಗೊಳಿಸಲಾಗಿದೆ. ಆದರೂ ಪ್ರಕರಣ ವಿಚಾರಣೆ ಇನ್ನೂ ಮುಗಿದಿಲ್ಲ ಎಂದು ಈ ವರ್ಷದ ಜುಲೈನಲ್ಲಿ ನ್ಯಾಯಾಲಯ ಹೇಳಿತ್ತು.</p>.<p>ಅಲ್ಲದೆ ಈ ಪ್ರಕರಣದ ವಿಚಾರಣೆಯನ್ನು ಮೂರು ತಿಂಗಳೊಳಗೆ ಮುಕ್ತಾಯಗೊಳಿಸಬೇಕು ಎಂದು 2019ರ ಮಾರ್ಚ್ 7 ರಂದೇ ನ್ಯಾಯಾಲಯವುರಾಜ್ಯ ಸರ್ಕಾರಕ್ಕೆ ಸೂಚಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>