ಮೀಲಾಲ್ ಮನೆಯಲ್ಲಿ ಇಲ್ಲದ ಸಮಯದಲ್ಲಿ ಪತ್ನಿಯೊಂದಿಗೆ ಸಲುಗೆ ಬೆಳೆಸಿದ್ದ ಅಕ್ಷಯ್ ಮನೆಗೆ ಬಂದು ಹೋಗುತ್ತಿದ್ದ. ಈ ವಿಚಾರ ತಿಳಿದಿದ್ದ ಮೀಲಾಲ್, ಪತ್ನಿಯ ಸಹಾಯದಿಂದ ಅಕ್ಷಯ್ಗೆ ಕರೆ ಮಾಡಿ ಮನೆಗೆ ಕರೆಸಿಕೊಂಡಿದ್ದ. ಅಕ್ಷಯ್ ಮನೆಗೆ ಬಂದ ಕೂಡಲೇ ಆತನ ಮೇಲೆ ಹಲ್ಲೆ ನಡೆಸಿ ಕತ್ತು ಸೀಳಿ ಹತ್ಯೆ ಮಾಡಿದ್ದಾನೆ. ಬಳಿಕ ಸಾಕ್ಷ್ಯ ನಾಶ ಮಾಡುವ ಉದ್ದೇಶದಿಂದ ಮೃತದೇಹವನ್ನು ಕತ್ತರಿಸಿದ್ದು, ದೇಹದ ಭಾಗಗಳನ್ನು ನಗರದ ಕಸದ ತೊಟ್ಟಿಗೆ ಎಸೆದಿದ್ದಾನೆ ಎಂದು ಪೊಲೀಸರು ವಿವರಿಸಿದ್ದಾರೆ.