<p><strong>ಲಖನೌ: </strong>ಉತ್ತರ ಪ್ರದೇಶದಲ್ಲಿ ಒಂಬತ್ತು ವರ್ಷಗಳ ಹಿಂದೆ ನಡೆದ ಲೋಕಸಭಾ ಚುನಾವಣೆ ವೇಳೆ ಸಮಾಜವಾದಿ ಪಕ್ಷದ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ನಂದಗೋಪಾಲ್ ಗುಪ್ತಾ ಅವರಿಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.</p>.<p>ಪ್ರಯಾಗ್ರಾಜ್ ಶಾಸಕ/ಸಂಸದರ ನ್ಯಾಯಾಲಯದ ವಿಶೇಷ ನ್ಯಾಯಾಧೀಶ ದಿನೇಶ್ ಚಂದ್ರ ಶುಕ್ಲಾ ಅವರು ಸಚಿವ ಗುಪ್ತಾ ಅವರಿಗೆ ಈ ಶಿಕ್ಷೆ ವಿಧಿಸಿದ್ದಲ್ಲದೆ, ₹ 10 ಸಾವಿರ ದಂಡವನ್ನೂ ವಿಧಿಸಿದರು. ಆದರೆ ನ್ಯಾಯಾಲಯ ಇದೇ ವೇಳೆ ಜಾಮೀನು ನೀಡಿದ್ದು, ಈ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸುವುದಾಗಿ ಗುಪ್ತಾ ತಿಳಿಸಿದರು.</p>.<p>ಗುಪ್ತಾ ಅವರು ಆಗ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದರು. 2014 ಎಸ್ಪಿ ಕಾರ್ಯಕರ್ತರ ಮೇಲಿನ ದಾಳಿಯ ನೇತೃತ್ವ ವಹಿಸಿದ್ದ ಆರೋಪದ ಮೇಲೆ ಮುತ್ತಿಗಂಜ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿತ್ತು. </p>.<p>ಕೆಲವು ತಿಂಗಳ ಹಿಂದೆ ಉತ್ತರ ಪ್ರದೇಶದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವ ರಾಕೇಶ್ ಸಚನ್ ಅವರು ಶಸ್ತ್ರಾಸ್ತ್ರ ಕಾಯ್ದೆಯಡಿಯಲ್ಲಿ ಒಂದು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದರು. ಈ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಸಾಬೀತಾದ ನಂತರ ಸಚನ್ ನ್ಯಾಯಾಲಯದಿಂದ ಪಲಾಯನ ಮಾಡಿ ಬಳಿಕ ನ್ಯಾಯಾಲಯಕ್ಕೆ ಶರಣಾಗಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ: </strong>ಉತ್ತರ ಪ್ರದೇಶದಲ್ಲಿ ಒಂಬತ್ತು ವರ್ಷಗಳ ಹಿಂದೆ ನಡೆದ ಲೋಕಸಭಾ ಚುನಾವಣೆ ವೇಳೆ ಸಮಾಜವಾದಿ ಪಕ್ಷದ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ನಂದಗೋಪಾಲ್ ಗುಪ್ತಾ ಅವರಿಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.</p>.<p>ಪ್ರಯಾಗ್ರಾಜ್ ಶಾಸಕ/ಸಂಸದರ ನ್ಯಾಯಾಲಯದ ವಿಶೇಷ ನ್ಯಾಯಾಧೀಶ ದಿನೇಶ್ ಚಂದ್ರ ಶುಕ್ಲಾ ಅವರು ಸಚಿವ ಗುಪ್ತಾ ಅವರಿಗೆ ಈ ಶಿಕ್ಷೆ ವಿಧಿಸಿದ್ದಲ್ಲದೆ, ₹ 10 ಸಾವಿರ ದಂಡವನ್ನೂ ವಿಧಿಸಿದರು. ಆದರೆ ನ್ಯಾಯಾಲಯ ಇದೇ ವೇಳೆ ಜಾಮೀನು ನೀಡಿದ್ದು, ಈ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸುವುದಾಗಿ ಗುಪ್ತಾ ತಿಳಿಸಿದರು.</p>.<p>ಗುಪ್ತಾ ಅವರು ಆಗ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದರು. 2014 ಎಸ್ಪಿ ಕಾರ್ಯಕರ್ತರ ಮೇಲಿನ ದಾಳಿಯ ನೇತೃತ್ವ ವಹಿಸಿದ್ದ ಆರೋಪದ ಮೇಲೆ ಮುತ್ತಿಗಂಜ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿತ್ತು. </p>.<p>ಕೆಲವು ತಿಂಗಳ ಹಿಂದೆ ಉತ್ತರ ಪ್ರದೇಶದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವ ರಾಕೇಶ್ ಸಚನ್ ಅವರು ಶಸ್ತ್ರಾಸ್ತ್ರ ಕಾಯ್ದೆಯಡಿಯಲ್ಲಿ ಒಂದು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದರು. ಈ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಸಾಬೀತಾದ ನಂತರ ಸಚನ್ ನ್ಯಾಯಾಲಯದಿಂದ ಪಲಾಯನ ಮಾಡಿ ಬಳಿಕ ನ್ಯಾಯಾಲಯಕ್ಕೆ ಶರಣಾಗಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>