‘ಹೊಸ ಮೊಬೈಲ್ ದೂರವಾಣಿ ಅನಾವರಣಗೊಳಿಸುವ ಸಂದರ್ಭದಲ್ಲಿ ಸಚಿವರು ಪತ್ರಿಕಾಗೋಷ್ಠಿ ನಡೆಸಿದ್ದರು. ಈ ಮೊಬೈಲ್ ಸ್ವದೇಶಿಯಾಗಿದ್ದು, ಕೌಶಲ ವಿಕಾಸ ಯೋಜನೆ ಅಡಿಯಲ್ಲಿ ಅಭಿವೃದ್ಧಿಪಡಿಸಲಾಗಿದೆ ಎಂದು ಸಚಿವರು ಸಾರ್ವಜನಿಕರಿಗೆ ತಿಳಿಸಿದ್ದರು. ಉತ್ತರ ಪ್ರದೇಶದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ ಎನ್ನುವುದಕ್ಕೆ ಇದೊಂದು ಉದಾಹರಣೆ ಸಾಕ್ಷಿ’ ಎಂದು ಉತ್ತರ ಪ್ರದೇಶ ಕಾಂಗ್ರೆಸ್ ಘಟಕದ ಅಧ್ಯಕ್ಷ ಅಜಯ್ ಕುಮಾರ್ ಲಲ್ಲು ಟೀಕಿಸಿದ್ದಾರೆ.