ಬಿಜೆಪಿ ಅವಹೇಳನಕ್ಕೆ ತಿರುಗೇಟು ನೀಡಿರುವ ಉತ್ತರ ಪ್ರದೇಶ ಕಾಂಗ್ರೆಸ್ ವಕ್ತಾರ ಅಶೋಕ್ ಸಿಂಗ್, ‘ಕಲಾವಿದರು ರಾಜಕೀಯಕ್ಕೆ ಬರುವುದು ಬಿಜೆಪಿಗೆ ಇಷ್ಟವಿಲ್ಲವೇ? ಅವರ ಪಕ್ಷದಲ್ಲಿ ಕಲಾವಿದರು ರಾಜಕೀಯಕ್ಕೆ ಬಂದಿಲ್ಲವೇ? ಮಂತ್ರಿಗಳು ಆಗಿಲ್ಲವೇ? ಒಬ್ಬ ಕಲಾವಿದ ರಾಜಕೀಯಕ್ಕೆ ಬಂದು ಜನಸೇವೆ ಮಾಡಬೇಕೆನ್ನುವುದು ಒಳ್ಳೆಯ ಸಂಕೇತ’ ಎಂದು ಹೇಳಿದ್ದಾರೆ.