‘ನಾನು ಹುಡುಗಿ, ಹೋರಾಡಬಲ್ಲೆ’ ಎಂಬ ಘೋಷಣೆಯ ಅಡಿಯಲ್ಲಿ, ಬರೇಲಿಯಲ್ಲಿ ಹೆಣ್ಣು ಮಕ್ಕಳಿಗಾಗಿ ಸುಪ್ರಿಯಾ ಅವರು ಆಯೋಜಿಸಿದ್ದ ಮ್ಯಾರಥಾನ್ನಲ್ಲಿ ಕಾಲ್ತುಳಿತದಂತಹ ಪರಿಸ್ಥಿತಿ ನಿರ್ಮಾಣ ಆಗಿತ್ತು. ಅಲ್ಲಿನ ಘಟನೆಯನ್ನು ವೈಷ್ಣೋದೇವಿಯಲ್ಲಿ ನಡೆದ ಕಾಲ್ತುಳಿತಕ್ಕೆ ಹೋಲಿಸಿ ಅವರು ನೀಡಿದ್ದ ಹೇಳಿಕೆಗೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು.