<p><strong>ಅಲೀಗಡ:</strong> ಸಮಾಜವನ್ನು ಧ್ರುವೀಕರಿಸುವ ಪ್ರಯತ್ನಗಳ ಬಗ್ಗೆ ರೈತರು ಎಚ್ಚರದಿಂದ ಇರಬೇಕು. ಹಿಂದೂ–ಮುಸ್ಲಿಂ ವಿಚಾರವನ್ನು ಮುನ್ನೆಲೆಗೆ ತಂದು ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಸ್ಥಾಪಿತ ಹಿತಾಸಕ್ತಿಗಳು ಪ್ರಯತ್ನಿಸಬಹುದು ಎಂದು ಭಾರತೀಯ ಕಿಸಾನ್ಯ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಹೇಳಿದ್ದಾರೆ.</p>.<p>ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳ ಜತೆಗೆ ಮಾತನಾಡಿದರು.</p>.<p>ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಆಯ್ಕೆಯು ಎಷ್ಟು ಮಹತ್ವದ್ದು ಎಂಬುದರ ಬಗ್ಗೆ ರೈತರಿಗೆ ಪೂರ್ಣ ಅರಿವಿದೆ. ಅವರಿಗೆ ಯಾರೂ ಹೇಳಿಕೊಡುವ ಅಗತ್ಯ ಇಲ್ಲ ಎಂದರು.</p>.<p>‘ಮುಂದಿನ ಕೆಲವು ವಾರಗಳಲ್ಲಿ ರಾಜಕೀಯ ಚರ್ಚೆಯಲ್ಲಿ ಹಿಂದೂ–ಮುಸ್ಲಿಂ, ಜಿನ್ನಾ ಮುಂತಾದವುಗಳು ಸಾಮಾನ್ಯವಾಗಿ ಕೇಳಿ ಬರಲಿವೆ. ಗಮನ ಬೇರೆಡೆಗೆ ಸೆಳೆಯುವ ಇಂತಹ ಪ್ರಯತ್ನಗಳ ಬಗ್ಗೆ ಎಚ್ಚರದಿಂದ ಇರಬೇಕು’ ಎಂದು ಟಿಕಾಯತ್ ಹೇಳಿದ್ದಾರೆ.</p>.<p>ಹಿಂದೂ–ಮುಸ್ಲಿಂ ಮತ್ತು ಜಿನ್ನಾ ಮಾರ್ಚ್ 15ರವರೆಗೆ ಉತ್ತರ ಪ್ರದೇಶದ ಅಧಿಕೃತ ಅತಿಥಿಗಳಾಗಿ ಇರಲಿದ್ಧಾರೆ ಎಂದೂ ಅವರು ವ್ಯಂಗ್ಯವಾಡಿದ್ದಾರೆ.</p>.<p>ರೈತರು ತಮ್ಮ ಉತ್ಪನ್ನಗಳನ್ನು ಅದಕ್ಕೆ ಮಾಡಿದ ವೆಚ್ಚದ ಅರ್ಧ ದರಕ್ಕೆ ಮಾರಾಟ ಮಾಡಬೇಕಾಗಿ ಬಂದಿದೆ. ಹೀಗಿರುವಾಗ, ಯಾರಿಗೆ ಮತ ನೀಡಬೇಕು ಎಂಬುದನ್ನು ಅವರಿಗೆ ಹೇಳಿಕೊಡುವ ಅಗತ್ಯವೇನೂ ಇಲ್ಲ ಎಂದು ಟಿಕಾಯತ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಲೀಗಡ:</strong> ಸಮಾಜವನ್ನು ಧ್ರುವೀಕರಿಸುವ ಪ್ರಯತ್ನಗಳ ಬಗ್ಗೆ ರೈತರು ಎಚ್ಚರದಿಂದ ಇರಬೇಕು. ಹಿಂದೂ–ಮುಸ್ಲಿಂ ವಿಚಾರವನ್ನು ಮುನ್ನೆಲೆಗೆ ತಂದು ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಸ್ಥಾಪಿತ ಹಿತಾಸಕ್ತಿಗಳು ಪ್ರಯತ್ನಿಸಬಹುದು ಎಂದು ಭಾರತೀಯ ಕಿಸಾನ್ಯ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಹೇಳಿದ್ದಾರೆ.</p>.<p>ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳ ಜತೆಗೆ ಮಾತನಾಡಿದರು.</p>.<p>ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಆಯ್ಕೆಯು ಎಷ್ಟು ಮಹತ್ವದ್ದು ಎಂಬುದರ ಬಗ್ಗೆ ರೈತರಿಗೆ ಪೂರ್ಣ ಅರಿವಿದೆ. ಅವರಿಗೆ ಯಾರೂ ಹೇಳಿಕೊಡುವ ಅಗತ್ಯ ಇಲ್ಲ ಎಂದರು.</p>.<p>‘ಮುಂದಿನ ಕೆಲವು ವಾರಗಳಲ್ಲಿ ರಾಜಕೀಯ ಚರ್ಚೆಯಲ್ಲಿ ಹಿಂದೂ–ಮುಸ್ಲಿಂ, ಜಿನ್ನಾ ಮುಂತಾದವುಗಳು ಸಾಮಾನ್ಯವಾಗಿ ಕೇಳಿ ಬರಲಿವೆ. ಗಮನ ಬೇರೆಡೆಗೆ ಸೆಳೆಯುವ ಇಂತಹ ಪ್ರಯತ್ನಗಳ ಬಗ್ಗೆ ಎಚ್ಚರದಿಂದ ಇರಬೇಕು’ ಎಂದು ಟಿಕಾಯತ್ ಹೇಳಿದ್ದಾರೆ.</p>.<p>ಹಿಂದೂ–ಮುಸ್ಲಿಂ ಮತ್ತು ಜಿನ್ನಾ ಮಾರ್ಚ್ 15ರವರೆಗೆ ಉತ್ತರ ಪ್ರದೇಶದ ಅಧಿಕೃತ ಅತಿಥಿಗಳಾಗಿ ಇರಲಿದ್ಧಾರೆ ಎಂದೂ ಅವರು ವ್ಯಂಗ್ಯವಾಡಿದ್ದಾರೆ.</p>.<p>ರೈತರು ತಮ್ಮ ಉತ್ಪನ್ನಗಳನ್ನು ಅದಕ್ಕೆ ಮಾಡಿದ ವೆಚ್ಚದ ಅರ್ಧ ದರಕ್ಕೆ ಮಾರಾಟ ಮಾಡಬೇಕಾಗಿ ಬಂದಿದೆ. ಹೀಗಿರುವಾಗ, ಯಾರಿಗೆ ಮತ ನೀಡಬೇಕು ಎಂಬುದನ್ನು ಅವರಿಗೆ ಹೇಳಿಕೊಡುವ ಅಗತ್ಯವೇನೂ ಇಲ್ಲ ಎಂದು ಟಿಕಾಯತ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>